ನಿತೀಶ್ ಕುಮಾರ್ 
ದೇಶ

ಖಾತೆ ಹಂಚಿದ ನಿತೀಶ್ ಕುಮಾರ್; 20 ವರ್ಷಗಳಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಗೃಹ ಖಾತೆ

ನಿತೀಶ್ ಕುಮಾರ್ ಅವರು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಗೃಹ ಖಾತೆ ನೀಡಿದ್ದು, ಮತ್ತೊಬ್ಬ ಬಿಜೆಪಿ ನಾಯಕ ಮಂಗಲ್ ಪಾಂಡೆ ಅವರಿಗೆ ಆರೋಗ್ಯ ಮತ್ತು ಕಾನೂನು ಖಾತೆಗಳನ್ನು ನೀಡಿದ್ದಾರೆ.

ಪಾಟ್ನಾ: ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನ, ನಿತೀಶ್ ಕುಮಾರ್ ಶುಕ್ರವಾರ ತಮ್ಮ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೃಹ ಖಾತೆಯನ್ನು ಮಿತ್ರ ಪಕ್ಷ ಬಿಜೆಪಿಗೆ ಬಿಟ್ಟುಕೊಟ್ಟಿದ್ದಾರೆ.

ಈ ಹಿಂದಿನ ಎನ್‌ಡಿಎ ಸರ್ಕಾರಗಳಲ್ಲಿ ಸಾಂಪ್ರದಾಯಿಕವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗೃಹ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳುತ್ತಿದ್ದರು. ಈ ಬಾರಿ ಬಿಹಾರದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸಾಮ್ರಾಟ್ ಚೌಧರಿಗೆ ವಹಿಸಲಾಗಿದೆ.

ನಿತೀಶ್ ಕುಮಾರ್ ಅವರು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರಿಗೆ ಗೃಹ ಖಾತೆ ನೀಡಿದ್ದು, ಮತ್ತೊಬ್ಬ ಬಿಜೆಪಿ ನಾಯಕ ಮಂಗಲ್ ಪಾಂಡೆ ಅವರಿಗೆ ಆರೋಗ್ಯ ಮತ್ತು ಕಾನೂನು ಖಾತೆಗಳನ್ನು ನೀಡಿದ್ದಾರೆ.

ಉಪಮುಖ್ಯಮಂತ್ರಿಯೂ ಆಗಿರುವ ವಿಜಯ್ ಕುಮಾರ್ ಸಿನ್ಹಾ ಅವರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಮತ್ತು ಭೂಸುಧಾರಣಾ ಖಾತೆಯನ್ನು ನೀಡಲಾಗಿದೆ.

ಮತ್ತೊಂದೆಡೆ, ಬಿಜೆಪಿಯ ಬಿಹಾರ ಘಟಕದ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರನ್ನು ಕೈಗಾರಿಕಾ ಸಚಿವರನ್ನಾಗಿ ಮಾಡಲಾಗಿದೆ.

ಬಿಜೆಪಿಯ ನಿತಿನ್ ನಬಿನ್ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ರಸ್ತೆ ನಿರ್ಮಾಣ ಇಲಾಖೆಗಳನ್ನು ಹಂಚಿಕೆ ಮಾಡಿದರೆ, ರಾಮ್ ಕೃಪಾಲ್ ಯಾದವ್ ಅವರಿಗೆ ಕೃಷಿ ಖಾತೆ ನೀಡಲಾಗಿದೆ.

ಸಂಜಯ್ ಸಿಂಗ್ ಟೈಗರ್ ಮತ್ತು ನಾರಾಯಣ್ ಪ್ರಸಾದ್ ಅವರಿಗೆ ಕ್ರಮವಾಗಿ ಕಾರ್ಮಿಕ ಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಖಾತೆಗಳನ್ನು ನೀಡಲಾಗಿದೆ.

ಎಲ್ ಜೆಪಿಯ ಇಬ್ಬರು ಸಚಿವರಿಗೆ ಕಬ್ಬು ಕೈಗಾರಿಕೆಗಳು ಮತ್ತು ಸಾರ್ವಜನಿಕ ಆರೋಗ್ಯ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಇನ್ನೂ ಎಂಟು ಸಚಿವರಿಗೆ ಖಾತೆ ಹಂಚಿಕೆ ಬಾಕಿ ಇದ್ದು, ಉಳಿದವರ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

ಸ್ಥಳೀಯ ಸಂಸ್ಥೆ ಚುನಾವಣೆ: ಮಹಾ ಸಿಎಂ ಫಡ್ನವೀಸ್, ಇಬ್ಬರು ಸಚಿವರ ಸಂಬಂಧಿ ಅವಿರೋಧ ಆಯ್ಕೆ; ಪ್ರತಿಪಕ್ಷ ಕಿಡಿ

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ನಾನು AK 47 ಥರ, ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ ಕಟ್ಟುತ್ತೇನೆ: ಯತ್ನಾಳ್

SCROLL FOR NEXT