ಏಕನಾಥ್ ಶಿಂಧೆ, ಸಿಎಂ ದೇವೇಂದ್ರ ಫಡ್ನವೀಸ್ ಸಾಂದರ್ಭಿಕ ಚಿತ್ರ 
ದೇಶ

ಸ್ಥಳೀಯ ಸಂಸ್ಥೆ ಚುನಾವಣೆ: ಮಹಾ ಸಿಎಂ ಫಡ್ನವೀಸ್, ಇಬ್ಬರು ಸಚಿವರ ಸಂಬಂಧಿ ಅವಿರೋಧ ಆಯ್ಕೆ; ಪ್ರತಿಪಕ್ಷ ಕಿಡಿ

ಆಡಳಿತ ಪಕ್ಷವು ಇತರ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲು ಹಣ ಬಲ ಮತ್ತು ಬೆದರಿಕೆ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಸರ್ಕಾರದ ಇಬ್ಬರು ಸಚಿವರ ಸಂಬಂಧಿಕರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಪ್ರತಿಪಕ್ಷಗಳು ಬಿಜೆಪಿ ಹಣ ಬಲ ಮತ್ತು ಬೆದರಿಕೆಯಿಂದ ಇತರ ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸೋದರಸಂಬಂಧಿ ಅಲ್ಹಾದ್ ಕಲೋಟಿ ಚಿಕಲ್ದಾರ ನಗರ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಶ್ಚರ್ಯಕರ ರೀತಿಯಲ್ಲಿ ಒಬ್ಬರಲ್ಲ, ಒಂಬತ್ತು ವಿರೋಧ ಪಕ್ಷಗಳ ಅಭ್ಯರ್ಥಿಗಳು ಕೊನೆಯ ಕ್ಷಣದಲ್ಲಿ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಸಚಿವೆ ಯಶೋಮತಿ ಠಾಕೂರ್ ಅವರು ಸಿಎಂ ಫಡ್ನವೀಸ್ ತಮ್ಮ ಸಂಬಂಧಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆಡಳಿತ ಪಕ್ಷವು ಇತರ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲು ಹಣ ಬಲ ಮತ್ತು ಬೆದರಿಕೆ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಿಎಂ ಫಡ್ನವೀಸ್ ಅವರ ಆಪ್ತರಾಗಿರುವ ಬಿಜೆಪಿ ಸಚಿವ ಗಿರೀಶ್ ಮಹಾಜನ್ ಕೂಡ ಜಾಮ್ನೇರ್ ನಗರ ಪಂಚಾಯತ್ ಅಧ್ಯಕ್ಷರಾಗಿ ತಮ್ಮ ಪತ್ನಿ ಸಾದನಾ ಮಹಾಜನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕುತೂಹಲಕಾರಿ ವಿಚಾರ ಎಂದರೆ ಕಣದಲ್ಲಿ ಉಳಿದಿದ್ದ ಒಬ್ಬ ಅಭ್ಯರ್ಥಿಯ ನಾಮಪತ್ರವನ್ನು ಪರಿಶೀಲನೆಯ ಸಮಯದಲ್ಲಿ ರದ್ದುಗೊಳಿಸಲಾಗಿದೆ. ಆದರೆ ಎನ್‌ಸಿಪಿ ಎಸ್‌ಪಿ ಮತ್ತು ಕಾಂಗ್ರೆಸ್‌ನ ಇತರ ಇಬ್ಬರು ಅಭ್ಯರ್ಥಿಗಳು ಆಶ್ಚರ್ಯಕರವಾಗಿ ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡರು.

ಮತ್ತೊಂದು ಘಟನೆಯಲ್ಲಿ, ಧುಲೆ ಜಿಲ್ಲೆಯ ದೋಂಧಾಸಿಯ ನಗರ ಪಂಚಾಯತ್ ಚುನಾವಣೆಯಲ್ಲಿ, ಬಿಜೆಪಿ ಸಚಿವ ಜೈಕುಮಾರ್ ರಾವಲ್ ಅವರ ತಾಯಿ ನಯನ್ ಕುವಾರ್ ರಾವಲ್ ಅವರು ಇತರ 26 ಕೌನ್ಸಿಲರ್‌ಗಳೊಂದಿಗೆ ಅವಿರೋಧವಾಗಿ ಆಯ್ಕೆಯಾದರು. ಶರ್ಯು ಬವಾಸ್ಕರ್ ಅವರು ಬಿಜೆಪಿ ಸಚಿವರ ತಾಯಿಯ ವಿರುದ್ಧ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರ ಫಾರ್ಮ್‌ನಲ್ಲಿನ ತಾಂತ್ರಿಕ ದೋಷಗಳು ಮತ್ತು ನಗರ ಪಂಚಾಯತ್‌ನ ಬಾಕಿ ಪಾವತಿಸದ ಕಾರಣ ಅವರ ನಾಮಪತ್ರವನ್ನು ರದ್ದುಗೊಳಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

BBK 12: ನಿರೂಪಕ ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು! ಯಾಕೆ ಗೊತ್ತಾ?

SCROLL FOR NEXT