ಪ್ರಶಾಂತ್ ಕಿಶೋರ್ 
ದೇಶ

ನಿತೀಶ್ ಕುಮಾರ್ ಸಚಿವ ಸಂಪುಟದಲ್ಲಿ ಕ್ರಿಮಿನಲ್ ಗಳು- ಭ್ರಷ್ಟರಿಗೆ ಹೆಚ್ಚಿನ ಪ್ರಾತಿನಿಧ್ಯ: ಪ್ರಶಾಂತ್ ಕಿಶೋರ್

ಜನವರಿ 15 ರಂದು ತಮ್ಮ ಪಕ್ಷ 'ಬಿಹಾರ ನವನಿರ್ಮಾಣ ಸಂಕಲ್ಪ ಯಾತ್ರೆ' ಪ್ರಾರಂಭಿಸಲಿದೆ, ಈ ಸಂದರ್ಭದಲ್ಲಿ ಜನ ಸುರಾಜ್ ಪಕ್ಷದ ಕಾರ್ಯಕರ್ತರು ರಾಜ್ಯದ ಎಲ್ಲಾ ಮನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

ಪಾಟ್ನಾ: ನಿತೀಶ್ ಕುಮಾರ್ ಸರ್ಕಾರದ ಹೊಸ ಸಚಿವ ಸಂಪುಟವು ಭ್ರಷ್ಟರು ಮತ್ತು ಕ್ರಿಮಿನಲ್ ನಾಯಕರಿಂದ ತುಂಬಿದೆ ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ.

ಪಶ್ಚಿಮ ಚಂಪಾರಣ್‌ನ ಗಾಂಧಿ ಆಶ್ರಮದಲ್ಲಿ ಒಂದು ದಿನದ ಮೌನ ಉಪವಾಸದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಿಶೋರ್, ಜನವರಿ 15 ರಂದು ತಮ್ಮ ಪಕ್ಷ 'ಬಿಹಾರ ನವನಿರ್ಮಾಣ ಸಂಕಲ್ಪ ಯಾತ್ರೆ' ಪ್ರಾರಂಭಿಸಲಿದೆ, ಈ ಸಂದರ್ಭದಲ್ಲಿ ಜನ ಸುರಾಜ್ ಪಕ್ಷದ ಕಾರ್ಯಕರ್ತರು ರಾಜ್ಯದ ಎಲ್ಲಾ ಮನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರ ಹೊಸ ಸಚಿವ ಸಂಪುಟವು ಭ್ರಷ್ಟರು ಮತ್ತು ಅಪರಾಧಿಗಳಿಂದ ತುಂಬಿದೆ. ಹಲವಾರು ಭ್ರಷ್ಟ ನಾಯಕರನ್ನು ಸೇರಿಸಿಕೊಂಡಿರುವುದು ಬಿಹಾರ ಜನತೆಯ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಿಎಂ ನಿತೀಶ್ ಕುಮಾರ್ ಅವರಿಗೆ ಬಿಹಾರದ ಮೇಲೆ ಎಷ್ಟು ಕಾಳಜಿ ಇದೆ ಎಂಬುದಕ್ಕೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವ ನಾಯಕರಿಂದಲೇ ತಿಳಿಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ. 1 ಕೋಟಿಗೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗೆ 10,000 ರೂ.ಗಳನ್ನು ವರ್ಗಾಯಿಸುವ ಮೂಲಕ ಮತಗಳನ್ನು ಖರೀದಿಸಿದ್ದಾರೆ. ಈಗ ಅವರಿಗೆ ರಾಜ್ಯ ಅಥವಾ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೆಜ್ಬೊಲ್ಲಾಹ್‌ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

ಇರಾನ್ ಶಾಲೆ ಸ್ಫೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ!

ಬಂಗಾಳ ಅಧಿಕಾರಿಗಳಿಗೆ CEC ಬೆದರಿಕೆ: ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಸ್ಕೂಟರ್ ನೀಡಲು ನಿರಾಕರಣೆ: ಗೆಳತಿ, ಆಕೆಯ ಪೋಷಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕ!

SCROLL FOR NEXT