ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ತಿರುಪತಿಯ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಪವಿತ್ರ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ ಸಾಂಪ್ರದಾಯಿಕ ಗೌರವಗಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಇಂದು ಬೆಳಗ್ಗೆ ತಿರುಪತಿಗೆ ಆಗಮಿಸಿದ ಅವರು ಮೊದಲು ತಿರುಮಲದ ಕ್ಷೇತ್ರಪಾಲಕ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ವೆಂಕಟೇಶ್ವರ ಸ್ವಾಮಿಯ ಮುಖ್ಯ ದೇವಾಲಯಕ್ಕೆ ತೆರಳಿದರು.
ದೇವಾಲಯದ ಮಹಾದ್ವಾರದಲ್ಲಿ, ಅವರನ್ನು ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು, ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್, ವೇದ ವಿದ್ವಾಂಸರು ಮತ್ತು ದೇವಾಲಯದ ಹಿರಿಯ ಅಧಿಕಾರಿಗಳು ಸಾಂಪ್ರದಾಯಿಕ ಸ್ವಾಗತಿಸಿದರು.
ರಾಷ್ಟ್ರಪತಿ ಮುರ್ಮು ಅವರು ಗರ್ಭಗುಡಿಗೆ ಪ್ರವೇಶಿಸುವ ಮೊದಲು ದ್ವಜಸ್ತಂಭದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿ ಅವರು ವೆಂಕಟೇಶ್ವರನ ದರ್ಶನ ಪಡೆದು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.
ದರ್ಶನದ ನಂತರ, ವೇದ ವಿದ್ವಾಂಸರು ರಂಗನಾಯಕಕುಲ ಮಂಟಪದಲ್ಲಿ ರಾಷ್ಟ್ರಪತಿಗಳಿಗೆ ವೇದಾಶೀರ್ವಚನ ನೀಡಿದರು. ನಂತರ ಟಿಟಿಡಿ ಅಧಿಕಾರಿಗಳು ಅವರಿಗೆ ತೀರ್ಥ ಪ್ರಸಾದವನ್ನು ನೀಡಿದರು.