ಉಗ್ರ ವೈದ್ಯ ಡಾ. ಅಹ್ಮದ್  online desk
ದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

ಈತನನ್ನು ಬಂಧಿಸಿ ಹೈದರಾಬಾದ್​ನಿಂದ ಬಂಧಿಸಿ ಗುಜರಾತ್ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಈತನ ದೇಶದ್ರೋಹ ಕೃತ್ಯ ತಿಳಿದ ಜೈಲಿನ ಕೈದಿಗಳು ಆಕ್ರೋಶಗೊಂಡು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.

ಅಹ್ಮದಾಬಾದ್: ರಿಸಿನ್ ಎಂಬ ರಾಸಾಯನಿಕ ಬಳಸಿ ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಡಾ. ಅಹ್ಮದ್ ಗೆ ಗುಜರಾತ್ ಜೈಲಿನಲ್ಲಿ ಭರ್ಜರಿ ಧರ್ಮದೇಟು ಬಿದ್ದಿದೆ.

ಈತನನ್ನು ಬಂಧಿಸಿ ಹೈದರಾಬಾದ್​ನಿಂದ ಬಂಧಿಸಿ ಗುಜರಾತ್ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಈತನ ದೇಶದ್ರೋಹ ಕೃತ್ಯ ತಿಳಿದ ಜೈಲಿನ ಕೈದಿಗಳು ಆಕ್ರೋಶಗೊಂಡು ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಹೆಚ್ಚಿನ ಭದ್ರತೆಯ ಸೆಲ್‌ನಲ್ಲಿದ್ದ ಕೈದಿಗಳು ಡಾ. ಅಹ್ಮದ್ ಮೇಲೆ ದಾಳಿ ಮಾಡಿದ್ದಾರೆ. ಉಗ್ರನಿಗೆ ಥಳಿಸಿದ ಪ್ರಕರಣದ ಸಂಬಂಧ ತನಿಖೆ ಜಾರಿಯಲ್ಲಿದೆ.

ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸದೇ ಇದ್ದಿದ್ದರೆ ಈತನ ಜೀವಕ್ಕೇ ಅಪಾಯ ಉಂಟಾಗುತ್ತಿತ್ತು. ಕೈದಿಗಳು ಈತನ ಮೇಲೆ ನಡೆಸಿದ ದಾಳಿಯ ತೀವ್ರತೆ ಆ ಪ್ರಮಾಣದಲ್ಲಿತ್ತು ಎಂದು ತಿಳಿದುಬಂದಿದೆ. ಸೆಲ್ ಹೊರಗೆ ನಿಂತಿದ್ದ ಕಾವಲುಗಾರರು ಗದ್ದಲ, ಈತನ ಚೀರಾಟ ಕೇಳಿದ ತಕ್ಷಣ, ಧಾವಿಸಿ ಬಂದು ದಾಳಿ ಮಾಡುತ್ತಿದ್ದವರಿಂದ ಉಗ್ರನನ್ನು ದೂರ ಎಳೆದೊಯ್ದಿದ್ದಾರೆ. ಥಳಿತದಿಂದ ಉಗ್ರ ಡಾ. ಅಹ್ಮದ್ ಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೀನಾದಿಂದ ವೈದ್ಯಕೀಯ ಕೋರ್ಸ್‌ನ ಪದವಿ ಪೂರೈಸಿರುವ ಈತ, ಭಾರತದಲ್ಲಿ ವೃತ್ತಿ ನಡೆಸಲು ಅಗತ್ಯವಿರುವ ಎಂಸಿಐ ಪರೀಕ್ಷೆ ಪಾಸು ಮಾಡುವಲ್ಲಿ ವಿಫಲನಾಗಿದ್ದ. ಹರಳೆಣ್ಣೆ ತಯಾರಿಸಲು ಬಳಸುವ ಬೀಜದಿಂದ ಎಣ್ಣೆ ತೆಗೆದ ನಂತರ ಉಳಿಯುವ ಅತ್ಯಲ್ಪ ವಿಷವನ್ನೇ ಈತ ತನ್ನ ಕೃತ್ಯಕ್ಕೆ ಬಳಸಲು ಯೋಜನೆ ರೂಪಿಸಿದ್ದ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

BBK 12: ನಿರೂಪಕ ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು! ಯಾಕೆ ಗೊತ್ತಾ?

SCROLL FOR NEXT