ಮಲ್ಲಿಕಾರ್ಜುನ ಖರ್ಗೆ 
ದೇಶ

ತಮಿಳುನಾಡು ಚುನಾವಣೆ: ಡಿಎಂಕೆ ಜತೆ ಸೀಟು ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರಚಿಸಿದ ಕಾಂಗ್ರೆಸ್

ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.

ಚೆನ್ನೈ: 2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಆಡಳಿತಾರೂಢ ಡಿಎಂಕೆ ಜೊತೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಐದು ಸದಸ್ಯರ ಸಮಿತಿ ರಚಿಸಿದ್ದಾರೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿಯ ಪಕ್ಷದ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ಸೆಲ್ವಪೆರುಂತಗೈ ಮತ್ತು ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್‌ಕುಮಾರ್ ಕೂಡ ಈ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಸಮಿತಿ ರಚಿಸಿದ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು, ಈ ಕ್ರಮವು ಇಂಡಿಯಾ ಬಣದ ಏಕತೆಯನ್ನು ಬಲಪಡಿಸುತ್ತದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚುನಾವಣೆಗೆ ಮುನ್ನ ಕಾಂಗ್ರೆಸ್ ಮೈತ್ರಿಕೂಟದ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಈ ಘೋಷಣೆ ಅಂತ್ಯ ಹಾಡುತ್ತದೆ ಎಂದು ಚಿದಂಬರಂ ಹೇಳಿದ್ದಾರೆ.

ಕಾಂಗ್ರೆಸ್ ಡಿಎಂಕೆ ಜೊತೆಗಿನ ಮೈತ್ರಿ ಮುರಿದುಕೊಂಡು ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಕೈಜೋಡಿಸುವ ಬಗ್ಗೆ ಮಾತುಕತೆ ನಡೆಯುತ್ತಿರುವುದರಿಂದ ಈ ಸಮಿತಿ ರಚನೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಿ-ಫೋರ್ಸ್ ಬ್ಲಾಕೌಟ್ ನಿಂದ ಪತನ ಸಾಧ್ಯತೆ: ತೇಜಸ್ ಅಪಘಾತ ಬಗ್ಗೆ ತಜ್ಞರು; ಮಗನ ಸಾವಿನ ಸುದ್ದಿ Youtube ನೋಡಿ ತಿಳಿದುಕೊಂಡ ಪೈಲಟ್ ತಂದೆ !

'ಅಲ್ಲಾಹ್ ಕಿ ತರಫ್ ಸೇ ಗಿರ್ ಗಯಾ': ತೇಜಸ್ ಯುದ್ಧವಿಮಾನ ಪತನವಾಗುತ್ತಲೇ ನಗುತ್ತಾ ಪಾಕ್ ಪತ್ರಕರ್ತರ ವಿಕೃತಿ! Video

ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪಟ್ಟು: ಕುತೂಹಲ ಕೆರಳಿಸಿದ ಖರ್ಗೆ ಜೊತೆಗಿನ ಭೇಟಿ!

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಆತ್ಮಹತ್ಯೆ; SIR ಒತ್ತಡ ಕಾರಣ ಎಂದ ಕುಟುಂಬ

SCROLL FOR NEXT