ಮಲ್ಲಿಕಾರ್ಜುನ ಖರ್ಗೆ 
ದೇಶ

ತಮಿಳುನಾಡು ಚುನಾವಣೆ: ಡಿಎಂಕೆ ಜತೆ ಸೀಟು ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರಚಿಸಿದ ಕಾಂಗ್ರೆಸ್

ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.

ಚೆನ್ನೈ: 2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಆಡಳಿತಾರೂಢ ಡಿಎಂಕೆ ಜೊತೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಐದು ಸದಸ್ಯರ ಸಮಿತಿ ರಚಿಸಿದ್ದಾರೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿಯ ಪಕ್ಷದ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ಸೆಲ್ವಪೆರುಂತಗೈ ಮತ್ತು ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್‌ಕುಮಾರ್ ಕೂಡ ಈ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಸಮಿತಿ ರಚಿಸಿದ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು, ಈ ಕ್ರಮವು ಇಂಡಿಯಾ ಬಣದ ಏಕತೆಯನ್ನು ಬಲಪಡಿಸುತ್ತದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚುನಾವಣೆಗೆ ಮುನ್ನ ಕಾಂಗ್ರೆಸ್ ಮೈತ್ರಿಕೂಟದ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಈ ಘೋಷಣೆ ಅಂತ್ಯ ಹಾಡುತ್ತದೆ ಎಂದು ಚಿದಂಬರಂ ಹೇಳಿದ್ದಾರೆ.

ಕಾಂಗ್ರೆಸ್ ಡಿಎಂಕೆ ಜೊತೆಗಿನ ಮೈತ್ರಿ ಮುರಿದುಕೊಂಡು ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಕೈಜೋಡಿಸುವ ಬಗ್ಗೆ ಮಾತುಕತೆ ನಡೆಯುತ್ತಿರುವುದರಿಂದ ಈ ಸಮಿತಿ ರಚನೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವೆನೆಜುವೆಲಾ ಮೇಲೆ ಅಮೆರಿಕ ಮತ್ತೊಂದು ದಾಳಿ; ತೈಲ ಟ್ಯಾಂಕರ್ ವಶಕ್ಕೆ, ರಷ್ಯಾ ಖಂಡನೆ, Video

ಜನಗಣತಿ 2027: ಮನೆ ಪಟ್ಟಿಗಳನ್ನು ಒಳಗೊಂಡ ಮೊದಲ ಹಂತ ಏಪ್ರಿಲ್ 1 ರಿಂದ ಆರಂಭ

'ಹೊಡಿತಾಳೆ.. ಬಡಿತಾಳೆ ನನ್ ಹೆಡ್ತಿ': ನಟ Dhanush ಪೊಲೀಸ್ ದೂರು! ಮದುವೆಯಾದ 9 ತಿಂಗಳಿಗೇ ಬೀದಿಗೆ ಬಂದ ಸಂಸಾರ!

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್

10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿ

SCROLL FOR NEXT