ಮಲ್ಲಿಕಾರ್ಜುನ ಖರ್ಗೆ 
ದೇಶ

ತಮಿಳುನಾಡು ಚುನಾವಣೆ: ಡಿಎಂಕೆ ಜತೆ ಸೀಟು ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರಚಿಸಿದ ಕಾಂಗ್ರೆಸ್

ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.

ಚೆನ್ನೈ: 2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಆಡಳಿತಾರೂಢ ಡಿಎಂಕೆ ಜೊತೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಐದು ಸದಸ್ಯರ ಸಮಿತಿ ರಚಿಸಿದ್ದಾರೆ.

ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ಈ ವಿಷಯ ತಿಳಿಸಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿಯ ಪಕ್ಷದ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದು, ಸೆಲ್ವಪೆರುಂತಗೈ ಮತ್ತು ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್‌ಕುಮಾರ್ ಕೂಡ ಈ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಸಮಿತಿ ರಚಿಸಿದ ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು, ಈ ಕ್ರಮವು ಇಂಡಿಯಾ ಬಣದ ಏಕತೆಯನ್ನು ಬಲಪಡಿಸುತ್ತದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚುನಾವಣೆಗೆ ಮುನ್ನ ಕಾಂಗ್ರೆಸ್ ಮೈತ್ರಿಕೂಟದ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಈ ಘೋಷಣೆ ಅಂತ್ಯ ಹಾಡುತ್ತದೆ ಎಂದು ಚಿದಂಬರಂ ಹೇಳಿದ್ದಾರೆ.

ಕಾಂಗ್ರೆಸ್ ಡಿಎಂಕೆ ಜೊತೆಗಿನ ಮೈತ್ರಿ ಮುರಿದುಕೊಂಡು ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಕೈಜೋಡಿಸುವ ಬಗ್ಗೆ ಮಾತುಕತೆ ನಡೆಯುತ್ತಿರುವುದರಿಂದ ಈ ಸಮಿತಿ ರಚನೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': ದೆಹಲಿ ಪ್ರತಿಭಟನೆಯಲ್ಲಿ PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ-Video

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

My friend, ಸ್ವಲ್ಪ ಜವಾಬ್ದಾರಿ ತೆಗೆದುಕೊಳ್ಳಿ: ಪ್ರಧಾನಿ ಮೋದಿಯ ಹೊಸ ವಿಡಿಯೋ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿ! Video

'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!