ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಆತ್ಮಹತ್ಯೆ; SIR ಒತ್ತಡ ಕಾರಣ ಎಂದ ಕುಟುಂಬ

ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಬುಧವಾರ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಎಲ್‌ಒ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಶನಿವಾರ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಿದೆ.

ನವೆಂಬರ್ 9 ರಿಂದ, ಮೂವರು ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರ್ಧಮಾನ್ ಜಿಲ್ಲೆಯ ಮೆಮಾರಿಯಲ್ಲಿ ಮತ್ತೊಬ್ಬ ಅಧಿಕಾರಿ ಮೆದುಳಿನ ಆಘಾತಕ್ಕೆ ಬಲಿಯಾಗಿದ್ದಾರೆ. ಇದು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಅಭಿಯಾನಕ್ಕೆ ಸಂಬಂಧಿಸಿದ "ಅಸಹನೀಯ" ಕೆಲಸದ ಹೊರೆಯಿಂದ ಖಿನ್ನತೆಗೆ ಒಳಗಾಗಿ ಈ ಸಾವುಗಳು ಸಂಭವಿಸಿವೆ ಎಂದು ಮೂವರ ಕುಟುಂಬಗಳು ಆರೋಪಿಸಿವೆ.

ಇಂದು 53 ವರ್ಷದ ಬಿಎಲ್‌ಒ ರಿಂಕು ತರಫ್ದಾರ್ ಅವರು ನಾಡಿಯಾ ಜಿಲ್ಲೆಯ ಕೃಷ್ಣನಗರದಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆತ್ಮಹತ್ಯೆ ಪತ್ರವೊಂದು ಪತ್ತೆಯಾಗಿದ್ದು, ಅದರಲ್ಲಿ "ನಿಗದಿತ ಸಮಯದೊಳಗೆ SIR-ಸಂಬಂಧಿತ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ನಮ್ಮ(BLO) ಅಪಾರ ಒತ್ತಡ ಹಾಕುತ್ತಿದ್ದರು. ಕೆಲಸದ ಒತ್ತಡವನ್ನು ಸಹಿಸಿಕೊಳ್ಳುವುದು ನನಗೆ ಸಾಧ್ಯವಾಗಲಿಲ್ಲ" ಎಂದು ಬರೆಯಲಾಗಿದೆ.

ರಿಂಕು ದೈನಂದಿನ ಕೆಲಸದ ಹೊರೆಯನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. "ಅವರು ಪ್ಯಾರಾ-ಟೀಚರ್ ಆಗಿದ್ದರು. ಆದರೆ ಮನೆ-ಮನೆಗೆ ವಿತರಣೆ ಮತ್ತು ಸಂಪೂರ್ಣ ಪರಿಶೀಲನೆಯ ನಂತರ ಭರ್ತಿ ಮಾಡಿದ ಎಣಿಕೆ ಫಾರ್ಮ್‌ಗಳ ಸಂಗ್ರಹದ ನಂತರ ಮತದಾರರ ಹೆಸರುಗಳ ಡೇಟಾ ನಮೂದು ಮುಂತಾದ ಗಣಕೀಕೃತ ಕೆಲಸಗಳಿಗೆ ಎಂದಿಗೂ ಒಗ್ಗಿಕೊಂಡಿರಲಿಲ್ಲ. ಆಡಳಿತವು ಅವರಿಗೆ ಬಲವಂತವಾಗಿ SIR ಕೆಲಸ ಮಾಡಲು ಹೇಳಿದೆ. ಅಂತಿಮವಾಗಿ, ಖಿನ್ನತೆ ಮತ್ತು ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ" ಎಂದು ಕುಟುಂಬ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!