ಉಷಾಬೆನ್ ಇಂದ್ರಸಿನ್ಹ್ ಸೋಲಂಕಿ 
ದೇಶ

SIR ಹೊರೆ: ಕರ್ತವ್ಯದ ವೇಳೆ ವಡೋದರಾ BLO ಸಹಾಯಕಿ ಸಾವು; ಗುಜರಾತ್‌ನಲ್ಲಿ ನಾಲ್ಕು ದಿನಗಳಲ್ಲಿ ನಾಲ್ವರು ಸಾವು

ಗುಜರಾತ್‌ನ ವಡೋದರಾದಲ್ಲಿ ನಡೆದ ಈ ಘಟನೆಯು ಎಸ್‌ಐಆರ್ ಕೆಲಸದ ಒತ್ತಡ ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ಹುಟ್ಟುಹಾಕಿದೆ.

ಅಹಮದಾಬಾದ್: ವಡೋದರಾ ಶಾಲೆಯಲ್ಲಿ ಶನಿವಾರ ಕರ್ತವ್ಯದ ವೇಳೆ ಬಿಎಲ್‌ಒ ಸಹಾಯಕಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದು, ಎಸ್‌ಐಆರ್ ಕೆಲಸದ ಒತ್ತಡದಿಂದ ಗುಜರಾತ್‌ನಾದ್ಯಂತ ನಾಲ್ಕು ದಿನಗಳಲ್ಲಿ ನಾಲ್ವರು ಬಿಎಲ್‌ಒ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರು ಹಠಾತ್ ಹೃದಯಾಘಾತದಿಂದ ಮತ್ತು ಒಬ್ಬರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ.

ಗುಜರಾತ್‌ನ ವಡೋದರಾದಲ್ಲಿ ನಡೆದ ಈ ಘಟನೆಯು ಎಸ್‌ಐಆರ್ ಕೆಲಸದ ಒತ್ತಡ ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ಹುಟ್ಟುಹಾಕಿದೆ. ಏಕೆಂದರೆ ಬಿಎಲ್‌ಒ ಸಹಾಯಕಿ ಉಷಾಬೆನ್ ಇಂದ್ರಸಿನ್ಹ್ ಸೋಲಂಕಿ ಅವರು ಕಡಕ್ ಬಜಾರ್‌ನ ಪ್ರತಾಪ್ ಶಾಲೆಯಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಗೋರ್ವಾ ಮಹಿಳಾ ಐಟಿಐನಲ್ಲಿ ಕೆಲಸ ಮಾಡುತ್ತಿದ್ದ ಉಷಾಬೆನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರೂ ಬಿಎಲ್‌ಒ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪತಿ ಇಂದ್ರಸಿನ್ಹ್ ಸೋಲಂಕಿ ಕುಟುಂಬವು ಅಧಿಕಾರಿಗಳಿಗೆ ಮೊದಲೇ ಎಚ್ಚರಿಕೆ ನೀಡಿತ್ತು ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

"ನನ್ನ ಹೆಂಡತಿಯ ಆರೋಗ್ಯ ಚೆನ್ನಾಗಿರಲಿಲ್ಲ. ನಾವು ಸುಭಾನ್‌ಪುರದ ಪಿಡಬ್ಲ್ಯೂ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದೇವೆ. ಅವಳು ಗೋರ್ವಾ ಐಟಿಐನಲ್ಲಿ ಕೆಲಸ ಮಾಡುತ್ತಿದ್ದಳು. ಅವಳಿಗೆ ಈ ಬಿಎಲ್‌ಒ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ನಾವು ವಿನಂತಿಸಿದ್ದೆವು. ಆದರೆ ನಮ್ಮ ಮನವಿಯ ಹೊರತಾಗಿಯೂ, ಅವಳನ್ನು ಕರ್ತವ್ಯಕ್ಕೆ ನಿಯೋಜಿಸಲಾಯಿತು" ಎಂದು ಪತಿ ಹೇಳಿದ್ದಾರೆ.

ಕ್ಷೇತ್ರಕಾರ್ಯದ ಸಮಯದಲ್ಲಿಉಷಾಬೆನ್, ತನ್ನ ಮೇಲ್ವಿಚಾರಕರಿಗಾಗಿ ಕಾಯುತ್ತಿದ್ದಾಗ, ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಅವಳಿಗೆ ಹೊಟ್ಟೆನೋವು ಬಂದಂತೆ ಕಾಣುತ್ತಿದೆ ಎಂದು ನಾವು ತಕ್ಷಣ ಸಯಾಜಿ ಆಸ್ಪತ್ರೆಗೆ ಕರೆದೊಯ್ದೆವು. ಆದರೆ ವೈದ್ಯರು ಅವಳು ಮೃತಪಟ್ಟಿರುವುದಾಗಿ" ತಿಳಿಸಿದರು ಎಂದರು.

ಮತ್ತೊಬ್ಬ ಸಂಬಂಧಿ ವಿಕ್ರಮಸಿಂಹ ಸುಹಾದಿಯಾ ಅವರು, ಅವಳಿಗೆ ಅತಿಯಾದ ಕೆಲಸದ ಒತ್ತಡ ಇತ್ತು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT