ರಾಹುಲ್ ಗಾಂಧಿ 
ದೇಶ

ಶ್ರೀರಾಮನ ಕುರಿತಾದ ಹೇಳಿಕೆ: ಡಿಸೆಂಬರ್ 18 ರಂದು ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿಗೆ ವಾರಣಾಸಿ ಕೋರ್ಟ್ ನಿರ್ದೇಶನ

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಯಜುರ್ವೇದ್ ವಿಕ್ರಮ್ ಸಿಂಗ್ ಅವರ ನ್ಯಾಯಾಲಯದ ಮುಂದೆ ಈ ವಿಷಯದ ವಿಚಾರಣೆ ನಡೆಯಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.

ವಾರಣಾಸಿ/ ಲಕ್ನೋ: ಶ್ರೀರಾಮನ ಕುರಿತಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಕಾರಣ, ಡಿಸೆಂಬರ್ 18 ರಂದು ನಡೆಯಲಿರುವ ವಿಚಾರಣೆಯಲ್ಲಿ ಖುದ್ದಾಗಿ ಹಾಜರಾಗುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ವಾರಣಾಸಿ ನ್ಯಾಯಾಲಯ ನಿರ್ದೇಶನ ನೀಡಿದೆ.

ಜನಪ್ರತಿನಿಧಿಗಳ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಯಜುರ್ವೇದ್ ವಿಕ್ರಮ್ ಸಿಂಗ್ ಅವರ ನ್ಯಾಯಾಲಯದ ಮುಂದೆ ಈ ವಿಷಯದ ವಿಚಾರಣೆ ನಡೆಯಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.

ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದದಲ್ಲಿ ಶ್ರೀರಾಮನನ್ನು "ಕಾಲ್ಪನಿಕ" ವ್ಯಕ್ತಿ ಎಂದು ರಾಹುಲ್ ಗಾಂಧಿ ಕರೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ವಕೀಲ ಹರಿಶಂಕರ್ ಪಾಂಡೆ ವಾರಣಾಸಿ ನ್ಯಾಯಾಲಯದಲ್ಲಿ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಏಪ್ರಿಲ್ 21 ರಂದು ಬ್ರೌನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ, ಶ್ರೀರಾಮನನ್ನು "ಕಾಲ್ಪನಿಕ" ಮತ್ತು ಆ ಅವಧಿಯ ಕಥೆಗಳನ್ನು "ಕಾಲ್ಪನಿಕ" ಎಂದು ಬಣ್ಣಿಸಿದ್ದಾರೆ ಎಂದು ಆರೋಪಿಸಿ ವಕೀಲ ಪಾಂಡೆ ಈ ವರ್ಷ ಮೇ 12 ರಂದು ಅರ್ಜಿಯನ್ನು ಸಲ್ಲಿಸಿದ್ದರು.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಹಿಂದೂಗಳನ್ನು ಮತ್ತು ಸನಾತನ ಧರ್ಮದ ಚಿಹ್ನೆಗಳನ್ನು ಪದೇ ಪದೇ ಅವಮಾನಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಶೇಷ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (MP-MLA) ಮೇ 17, 2025 ರಂದು ಅರ್ಜಿಯನ್ನು ವಜಾಗೊಳಿಸಿದ್ದರು. ನಂತರ ಪಾಂಡೆ ಸೆಪ್ಟೆಂಬರ್ 26, 2025 ರಂದು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದರು.

ರಾಹುಲ್ ಗಾಂಧಿ ರಾಮನ ಅಸ್ತಿತ್ವವನ್ನು ಪ್ರಶ್ನಿಸುವ ಮೂಲಕ ರಾಷ್ಟ್ರೀಯ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಯುಪಿಎ ಸರ್ಕಾರ ರಾಮ ಮಂದಿರವನ್ನು ವಿರೋಧಿಸಿತ್ತು ಮತ್ತು ಗಾಂಧಿ ಈಗ ವಿದೇಶದಲ್ಲಿ ರಾಮನ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ