ಮಾಜಿ CJI ಗವಾಯಿ - ನೂತನ CJI ಸೂರ್ಯಕಾಂತ್ 
ದೇಶ

ಮಾದರಿ ನಡೆ: ನೂತನ CJI ಸೂರ್ಯಕಾಂತ್ ಗೆ ತಮ್ಮ ಸರ್ಕಾರಿ ಕಾರು ಬಿಟ್ಟುಕೊಟ್ಟ ಮಾಜಿ CJI ಗವಾಯಿ

ನವೆಂಬರ್ 23 ರಂದು ನಿವೃತ್ತರಾದ ನ್ಯಾಯಮೂರ್ತಿ ಗವಾಯಿ ಅವರು ಇಂದು ಅಧಿಕೃತ ಸರ್ಕಾರಿ ಕಾರಿನಲ್ಲಿ ರಾಷ್ಟ್ರಪತಿ ಭವನ ತಲುಪಿದರು.

ನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ತಮ್ಮ ಉತ್ತರಾಧಿಕಾರಿ ಸೂರ್ಯಕಾಂತ್ ಅವರಿಗೆ ಅಧಿಕೃತ ಮರ್ಸಿಡಿಸ್-ಬೆನ್ಜ್ ಕಾರನ್ನು ಬಿಟ್ಟು ಇತರರಿಗೆ ಮಾದರಿಯಾದರು.

ನವೆಂಬರ್ 23 ರಂದು ನಿವೃತ್ತರಾದ ನ್ಯಾಯಮೂರ್ತಿ ಗವಾಯಿ ಅವರು ಇಂದು ಅಧಿಕೃತ ಸರ್ಕಾರಿ ಕಾರಿನಲ್ಲಿ ರಾಷ್ಟ್ರಪತಿ ಭವನ ತಲುಪಿದರು. ಆದರೆ ಸಮಾರಂಭದ ನಂತರ ಸರ್ಕಾರಿ ಕಾರನ್ನು ನೂತನ CJIಗೆ ಬಿಟ್ಟುಕೊಟ್ಟು ತಾವು ತಮ್ಮ ವೈಯಕ್ತಿಕ ವಾಹನದಲ್ಲಿ ನಿವಾಸಕ್ಕೆ ತೆರಳಿದರು.

"ಪ್ರಮಾಣವಚನ ಸಮಾರಂಭದ ನಂತರ, ನ್ಯಾಯಮೂರ್ತಿ ಗವಾಯಿ ಅವರು, ಮುಖ್ಯ ನ್ಯಾಯಮೂರ್ತಿಗಾಗಿ ಗೊತ್ತುಪಡಿಸಿದ ಅಧಿಕೃತ ವಾಹನವನ್ನು ಬಿಟ್ಟು ರಾಷ್ಟ್ರಪತಿ ಭವನದಿಂದ ಪರ್ಯಾಯ ವಾಹನದಲ್ಲಿ ಮರಳಿದರು. ನೂತನ ಸಿಜೆಐ, ಸುಪ್ರೀಂ ಕೋರ್ಟ್‌ಗೆ ಹೋಗಲು ಅಧಿಕೃತ ಕಾರು ಲಭ್ಯವಾಗುವಂತೆ ನೋಡಿಕೊಂಡಿದ್ದಾರೆ" ಎಂದು ಗವಾಯಿ ಅವರ ಆಪ್ತರು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ನಡೆದ ಸಂಕ್ಷಿಪ್ತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 53ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಹಿಂದಿಯಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT