ಡಾ. ಇರ್ಫಾನ್ ಅನ್ಸಾರಿ 
ದೇಶ

ಬಿಎಲ್‌ಒಗಳನ್ನು ಮನೆಯೊಳಗೆ ಕೂಡಿಹಾಕಿ, ಹೆಸರು ಡಿಲೀಟ್ ಮಾಡಲು ಬಿಡಬೇಡಿ: SIR ಬಗ್ಗೆ ಜಾರ್ಖಂಡ್ ಸಚಿವ

ಬಿಜೆಪಿಯು, ಜನರನ್ನು "ಒಳನುಸುಳುಕೋರರು" ಎಂದು ಬ್ರಾಂಡ್ ಮಾಡಲು ಮತ್ತು ಎಸ್‌ಐಆರ್ ಸೋಗಿನಲ್ಲಿ ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ರಾಂಚಿ: ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒ) ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಗಾಗಿ ನಿಮ್ಮ ಮನೆಗಳಿಗೆ ಭೇಟಿ ನೀಡಿದರೆ ಅವರನ್ನು ಒಳಗೆ ಕೂಡಿಹಾಕಿ ಬೀಗ ಹಾಕುವಂತೆ ಜಾರ್ಖಂಡ್ ಆರೋಗ್ಯ ಸಚಿವ ಡಾ. ಇರ್ಫಾನ್ ಅನ್ಸಾರಿ ಅವರ ಭಾನುವಾರ ಜನರಿಗೆ ವಿವಾದಾತ್ಮಕ ಸಲಹೆ ನೀಡಿದ್ದಾರೆ.

ಜಾಮ್ತಾರಾದಲ್ಲಿ ನಡೆದ "ಸೇವಾ ಕೆ ಅಧಿಕಾರ್ ಸಪ್ತಾಹ್" ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಇರ್ಫಾನ್ ಅನ್ಸಾರಿ, ಬಿಜೆಪಿಯು, ಜನರನ್ನು "ಒಳನುಸುಳುಕೋರರು" ಎಂದು ಬ್ರಾಂಡ್ ಮಾಡಲು ಮತ್ತು ಎಸ್‌ಐಆರ್ ಸೋಗಿನಲ್ಲಿ ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

"ಯಾರಾದರೂ(ಬಿಎಲ್‌ಒ) ಮತದಾರರ ಪಟ್ಟಿಯಿಂದ ನಿಮ್ಮ ಹೆಸರನ್ನು(ಎಸ್‌ಐಆರ್) ತೆಗೆದುಹಾಕಲು ಬಂದರೆ, ಅವರನ್ನು ನಿಮ್ಮ ಮನೆಯೊಳಗೆ ಕೂಡಿಹಾಕಿ ಬೀಗ ಹಾಕಿ.....ನಾನು ಬಂದು ಬೀಗ ತೆರೆಯುತ್ತೇನೆ. ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ನಿಮ್ಮ ಹೆಸರನ್ನು ತೆಗೆದುಹಾಕಲು ಅವರಿಗೆ ಅವಕಾಶ ನೀಡಬೇಡಿ" ಎಂದು ಇರ್ಫಾನ್ ಅನ್ಸಾರಿ ಹೇಳಿದ್ದಾರೆ.

ಅನ್ಸಾರಿ ಪ್ರಕಾರ, ಮತದಾರರ ಪಟ್ಟಿಯಿಂದ ಮತದಾರರನ್ನು ತೆಗೆದುಹಾಕಲು ಎಸ್‌ಐಆರ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಅದೇ ಪ್ರಕ್ರಿಯೆಯಡಿಯಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ಪರಿಣಾಮವಾಗಿ ಮಹಾಘಟಬಂಧನ್‌ಗೆ ಸುಮಾರು 80 ವಿಧಾನಸಭಾ ಕ್ಷೇತ್ರಗಳಲ್ಲಿ ನಷ್ಟವಾಗಿದೆ.

ಚುನಾವಣಾ ಆಯೋಗದ ಈ ಕ್ರಮವು ಸಾವಿರಾರು ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಂಡಿದೆ. ಅಲ್ಲದೆ ಅವರ ಪೌರತ್ವದ ಬಗ್ಗೆಯೂ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಅನ್ಸಾರಿ ಹೇಳಿದರು.

ಬಿಜೆಪಿ ಈಗ ಪಶ್ಚಿಮ ಬಂಗಾಳ ಮತ್ತು ನಂತರ ಜಾರ್ಖಂಡ್‌ನಲ್ಲಿ ಇದೇ ರೀತಿಯ ತಂತ್ರಗಳನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!