ಡಾ. ಇರ್ಫಾನ್ ಅನ್ಸಾರಿ 
ದೇಶ

ಬಿಎಲ್‌ಒಗಳನ್ನು ಮನೆಯೊಳಗೆ ಕೂಡಿಹಾಕಿ, ಹೆಸರು ಡಿಲೀಟ್ ಮಾಡಲು ಬಿಡಬೇಡಿ: SIR ಬಗ್ಗೆ ಜಾರ್ಖಂಡ್ ಸಚಿವ

ಬಿಜೆಪಿಯು, ಜನರನ್ನು "ಒಳನುಸುಳುಕೋರರು" ಎಂದು ಬ್ರಾಂಡ್ ಮಾಡಲು ಮತ್ತು ಎಸ್‌ಐಆರ್ ಸೋಗಿನಲ್ಲಿ ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ರಾಂಚಿ: ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒ) ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಗಾಗಿ ನಿಮ್ಮ ಮನೆಗಳಿಗೆ ಭೇಟಿ ನೀಡಿದರೆ ಅವರನ್ನು ಒಳಗೆ ಕೂಡಿಹಾಕಿ ಬೀಗ ಹಾಕುವಂತೆ ಜಾರ್ಖಂಡ್ ಆರೋಗ್ಯ ಸಚಿವ ಡಾ. ಇರ್ಫಾನ್ ಅನ್ಸಾರಿ ಅವರ ಭಾನುವಾರ ಜನರಿಗೆ ವಿವಾದಾತ್ಮಕ ಸಲಹೆ ನೀಡಿದ್ದಾರೆ.

ಜಾಮ್ತಾರಾದಲ್ಲಿ ನಡೆದ "ಸೇವಾ ಕೆ ಅಧಿಕಾರ್ ಸಪ್ತಾಹ್" ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಇರ್ಫಾನ್ ಅನ್ಸಾರಿ, ಬಿಜೆಪಿಯು, ಜನರನ್ನು "ಒಳನುಸುಳುಕೋರರು" ಎಂದು ಬ್ರಾಂಡ್ ಮಾಡಲು ಮತ್ತು ಎಸ್‌ಐಆರ್ ಸೋಗಿನಲ್ಲಿ ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

"ಯಾರಾದರೂ(ಬಿಎಲ್‌ಒ) ಮತದಾರರ ಪಟ್ಟಿಯಿಂದ ನಿಮ್ಮ ಹೆಸರನ್ನು(ಎಸ್‌ಐಆರ್) ತೆಗೆದುಹಾಕಲು ಬಂದರೆ, ಅವರನ್ನು ನಿಮ್ಮ ಮನೆಯೊಳಗೆ ಕೂಡಿಹಾಕಿ ಬೀಗ ಹಾಕಿ.....ನಾನು ಬಂದು ಬೀಗ ತೆರೆಯುತ್ತೇನೆ. ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ನಿಮ್ಮ ಹೆಸರನ್ನು ತೆಗೆದುಹಾಕಲು ಅವರಿಗೆ ಅವಕಾಶ ನೀಡಬೇಡಿ" ಎಂದು ಇರ್ಫಾನ್ ಅನ್ಸಾರಿ ಹೇಳಿದ್ದಾರೆ.

ಅನ್ಸಾರಿ ಪ್ರಕಾರ, ಮತದಾರರ ಪಟ್ಟಿಯಿಂದ ಮತದಾರರನ್ನು ತೆಗೆದುಹಾಕಲು ಎಸ್‌ಐಆರ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಅದೇ ಪ್ರಕ್ರಿಯೆಯಡಿಯಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ಪರಿಣಾಮವಾಗಿ ಮಹಾಘಟಬಂಧನ್‌ಗೆ ಸುಮಾರು 80 ವಿಧಾನಸಭಾ ಕ್ಷೇತ್ರಗಳಲ್ಲಿ ನಷ್ಟವಾಗಿದೆ.

ಚುನಾವಣಾ ಆಯೋಗದ ಈ ಕ್ರಮವು ಸಾವಿರಾರು ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಂಡಿದೆ. ಅಲ್ಲದೆ ಅವರ ಪೌರತ್ವದ ಬಗ್ಗೆಯೂ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಅನ್ಸಾರಿ ಹೇಳಿದರು.

ಬಿಜೆಪಿ ಈಗ ಪಶ್ಚಿಮ ಬಂಗಾಳ ಮತ್ತು ನಂತರ ಜಾರ್ಖಂಡ್‌ನಲ್ಲಿ ಇದೇ ರೀತಿಯ ತಂತ್ರಗಳನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT