ರಾಮ ಮಂದಿರ- ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ online desk
ದೇಶ

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಧ್ವಜಾರೋಹಣ ಮಾಡಬೇಕೆಂದು ನಾನು ಧರ್ಮಗ್ರಂಥಗಳಲ್ಲಿ ಯಾವುದೇ ಉಲ್ಲೇಖವನ್ನು ಓದಿಲ್ಲ. ಶಿಖರದ ಪ್ರತಿಷ್ಠಾಪನೆ ನಡೆಯಬೇಕು. ಶಿಖರದ ಪ್ರತಿಷ್ಠಾಪನೆ ನಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ದೇವಾಲಯದ ಮೇಲೆ ನಾಳೆ (ನ.25) ರಂದು ಧರ್ಮಧ್ವಜಾರೋಹಣ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ರಾಮ ಮಂದಿರದ 191 ಅಡಿ ಎತ್ತರದ ಶಿಖರದ ಮೇಲೆ ಮೊದಲ ಬಾರಿಗೆ ಈ ಧ್ವಜವನ್ನು ಹಾರಿಸಲಿದ್ದಾರೆ. ಈ ಕಾರ್ಯಕ್ರಮದ ಕುರಿತಾಗಿ ಬದರಿ ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಶಂಕರಾಚಾರ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧ್ವಜಾರೋಹಣ ಮಾಡಬೇಕೆಂದು ನಾನು ಧರ್ಮಗ್ರಂಥಗಳಲ್ಲಿ ಯಾವುದೇ ಉಲ್ಲೇಖವನ್ನು ಓದಿಲ್ಲ. ಶಿಖರದ ಪ್ರತಿಷ್ಠಾಪನೆ ನಡೆಯಬೇಕು. ಶಿಖರದ ಪ್ರತಿಷ್ಠಾಪನೆ ನಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅದಕ್ಕಾಗಿಯೇ ನಾನು ಹೇಳುತ್ತಿರುವುದು ಶಾಸ್ತ್ರಗಳ ಪ್ರಕಾರ ಏನಾದರೂ ನಡೆಯುತ್ತಿದ್ದರೆ, ನಾವು ಅದರಲ್ಲಿ ಭಾಗವಹಿಸುತ್ತೇವೆ. ಏನಾದರೂ ಅನಿಯಂತ್ರಿತವಾಗಿ ನಡೆಯುತ್ತಿದ್ದರೆ, ನಮ್ಮ ಭಾಗವಹಿಸುವಿಕೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ರಾಮ ಮಂದಿರ ನಿರ್ಮಾಣದಲ್ಲಿ 2 ಕೋಟಿಗಿಂತ ಹೆಚ್ಚು ದೇಣಿಗೆ ನೀಡಿದ 100 ದಾನಿಗಳನ್ನು ಧ್ವಜಾರೋಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಲಕ್ನೋ, ಅಯೋಧ್ಯೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ 25 ಜಿಲ್ಲೆಗಳ ಜನರು ಮತ್ತು ರೈತರಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ.

ದೇವಾಲಯಗಳಲ್ಲಿ ನೀವು ಧ್ವಜವನ್ನು ಕೆಳಗಿನಿಂದ ಮೇಲಕ್ಕೆ ಹಾರಿಸುವುದನ್ನು (ಸಾಮಾನ್ಯವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ರೀತಿ)ಯಲ್ಲಿ ನೋಡಿರಲಿಕ್ಕಿಲ್ಲ. ರಾಮ ಮಂದಿರದಲ್ಲಿ ಶಿಖರ ಸ್ಥಾಪನೆಗೆ ಧಾರ್ಮಿಕ ವಿಧಿಗಳು ಇರುತ್ತದೆ ಎಂದು ಹೇಳಲಾಗುವುದಿಲ್ಲ. ಧ್ವಜವನ್ನು ಒಮ್ಮೆ ಸ್ಥಾಪಿಸಿದಾಗ, ಧ್ವಜವನ್ನು ಬದಲಾಯಿಸಲಾಗುತ್ತದೆ. ಚಂಪತ್ ರಾಯ್ ಜಿ ಧ್ವಜಾರೋಹಣ ಮಾಡಲಾಗುವುದು ಎಂದು ಹೇಳುತ್ತಿರುವುದನ್ನು ನಾವು ವೀಡಿಯೊದಲ್ಲಿ ನೋಡಿದ್ದೇವೆ.

ಧ್ವಜವನ್ನು ಕೆಳಗಿನಿಂದ ಮೇಲಕ್ಕೆ ಹಾರಿಸುವುದನ್ನು ನೀವು ಎಲ್ಲಿಯೂ ನೋಡಿರಲಿಕ್ಕಿಲ್ಲ ಎಂದು ನಾನು ಹೇಳುತ್ತಿದ್ದೇನೆ. ಜಗನ್ನಾಥ ದೇವಾಲಯದಲ್ಲಿ, ಧ್ವಜವನ್ನು ಪ್ರತಿದಿನ ಬದಲಾಯಿಸಲಾಗುತ್ತದೆ. ಒಬ್ಬ ವ್ಯಕ್ತಿಯು ಧ್ವಜದೊಂದಿಗೆ ಮೇಲಕ್ಕೆ ಏರುತ್ತಾನೆ. ನಂತರ ಅದು ಅಲ್ಲಿಂದಲೇ ಬಿಚ್ಚಿಕೊಳ್ಳುತ್ತದೆ, ಅದನ್ನು ಸಾಮಾನ್ಯವಾದ ಧ್ವಜಾರೋಹಣ ಶೈಲಿಯಲ್ಲಿ ಹಾರಿಸುವುದಿಲ್ಲ. ದ್ವಾರಕಾ ದೇವಾಲಯದಲ್ಲಿ, ಧ್ವಜಗಳನ್ನು ಒಂದೇ ದಿನದಲ್ಲಿ ನಾಲ್ಕರಿಂದ ಐದು ಬಾರಿ ಬದಲಾಯಿಸಲಾಗುತ್ತದೆ.ಅ

ಶಾಸ್ತ್ರಗಳಿಗೆ ಸಮ್ಮತವಾಗದ ಕೆಲಸ ಮಾಡಲಾಗುತ್ತಿದೆ, ಆದ್ದರಿಂದ ನಮ್ಮ ಭಾಗವಹಿಸುವಿಕೆಯಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ಮೊದಲ ಧ್ವಜವನ್ನು ಪವಿತ್ರಗೊಳಿಸಿದ ನಂತರವೇ ಧ್ವಜವನ್ನು ಬದಲಾಯಿಸಬಹುದು. ಇದು ಶಿಖರದ ಸ್ಥಾಪನೆಗೆ ಸಂಬಂಧಿಸಿದ ಧಾರ್ಮಿಕ ವಿಧಿಗಳ ಜೊತೆಗೆ ನಡೆಯುತ್ತದೆ. ಶಿಖರಕ್ಕೆ ಸಂಬಂಧಿಸಿದ ಧಾರ್ಮಿಕ ವಿಧಿಗಳ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಈಗ ಧ್ವಜಾರೋಹಣ ನಡೆಯಲಿದೆ ಮತ್ತು ಕೆಲವು ಜನರು ಬರುತ್ತಾರೆ ಎಂದು ಹೇಳಲಾಗುತ್ತಿದೆಯಷ್ಟೇ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

WPL 2026: ಮೊದಲ ಪಂದ್ಯದಲ್ಲೇ ಸಿನಿಮಾ ತೋರಿಸಿದ RCB, 4 ಎಸೆತಗಳಲ್ಲಿ 20 ರನ್! ಹೀರೋ ಆದ Nadine de Klerk!

SCROLL FOR NEXT