ಪಲಾಶ್ ಮುಚ್ಚಲ್ ಮತ್ತು ಸ್ಮೃತಿ ಮಂಧಾನ 
ದೇಶ

ಸ್ಮೃತಿ ಮಂಧಾನ ಭಾವಿ ಪತಿ ಪಲಾಶ್ ಮುಚ್ಚಲ್ ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್; ಮದುವೆ ಭವಿಷ್ಯವೇನು?

ಪಲಾಶ್ ಮುಚ್ಚಲ್ ಅವರನ್ನು ಕಳೆದ ಮೂರು ದಿನಗಳಿಂದ ಎದೆ ನೋವು ಮತ್ತು ಉಸಿರಾಟದ ತೊಂದರೆಯಿಂದಾಗಿ ಮುಂಬೈನ ಗೋರೆಗಾಂವ್‌ನಲ್ಲಿರುವ ಎಸ್‌ಆರ್‌ವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರ ಭಾವಿ ಪತಿ ಪಲಾಶ್ ಮುಚ್ಚಲ್ ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೌದು.. ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರನ್ನು ಕಳೆದ ಮೂರು ದಿನಗಳಿಂದ ಎದೆ ನೋವು ಮತ್ತು ಉಸಿರಾಟದ ತೊಂದರೆಯಿಂದಾಗಿ ಮುಂಬೈನ ಗೋರೆಗಾಂವ್‌ನಲ್ಲಿರುವ ಎಸ್‌ಆರ್‌ವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ನಂತರ ಪಲಾಶ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ದೃಢಪಡಿಸಿದೆ.

ಈ ಹಿಂದೆ ವಿವಾಹಕ್ಕೆ ಕ್ಷಣಗಣನೆ ಇರುವಾಗ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಮಂಧಾನ ಹೃದಯಾಘಾತಕ್ಕೊಳಗಾಗಿದ್ದರು, ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೇ ಸಂದರ್ಭದಲ್ಲೇ ಪಲಾಶ್ ಮುಚ್ಚಲ್ ಕೂಡ ಆಘಾತಕ್ಕೊಳಗಾಗಿದ್ದರು. ಅವರನ್ನೂ ಮುಂಬೈನ ಗೋರೆಗಾಂವ್‌ನಲ್ಲಿರುವ ಎಸ್‌ಆರ್‌ವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಗಳ ಬಳಿಕ ಸ್ಮೃತಿ ಮಂಧಾನ ಅವರ ವಿವಾಹವನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿತ್ತು.

ಇದೀಗ ಪಲಾಶ್ ಮುಚ್ಚಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ ಪಲಾಶ್ ಮುಚ್ಚಲ್ ಮನೆಯಲ್ಲೇ ವೈದ್ಯರ ಪರೀಕ್ಷಣೆಯಲ್ಲಿರಲಿದ್ದಾರೆ ಎಂದು ಹೇಳಲಾಗಿದೆ.

ಮದುವೆ ಭವಿಷ್ಯವೇನು?

ಇನ್ನು ಇಂದು ಬೆಳಗ್ಗೆಯಷ್ಟೇ ಸ್ಮೃತಿ ಮಂಧಾನ ಅವರ ತಂದೆ ಕೂಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಹೀಗಾಗಿ ಪಲಾಶ್ ಮುಚ್ಚಲ್ ಮತ್ತು ಸ್ಮೃತಿ ಮಂಧಾನ ಮದುವೆ ಕುರಿತು ಮತ್ತೆ ಸುದ್ದಿಗಳು ಹಬ್ಬಲಾರಂಭಿಸಿವೆ.

ಸ್ಥಗಿತವಾಗಿರುವ ಮದುವೆ ಕಾರ್ಯಕ್ರಮಗಳು ಯಾವಾಗ ಪುನಾರಂಭಗೊಳ್ಳಲಿವೆ ಎಂಬಿತ್ಯಾದಿ ಅಂಶಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೊಳಪಡುತ್ತಿವೆ. ಆದರೂ ಉಭಯ ಕುಟುಂಬಗಳು ಮದುವೆ ದಿನಾಂಕದ ಬಗ್ಗೆ ಯಾವುದೇ ಹೊಸ ಯೋಜನೆಗಳನ್ನು ಇನ್ನೂ ಘೋಷಿಸಿಲ್ಲ.

ಪಲಾಶ್ ಮುಚ್ಚಲ್ ಕುರಿತು ಊಹಾಪೋಹ

ಇನ್ನು ಪಲಾಶ್ ಮುಚ್ಚಲ್ ಕುರಿತು ಕೆಲ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಹಬ್ಬಿದ್ದು, ಈ ವದಂತಿಗಳನ್ನು ಪಲಾಶ್ ಅವರ ತಾಯಿ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo ದರದಲ್ಲಿ ಯಾವುದೇ ಬದಲಾವಣೆ ಇಲ್ಲ; ಶೇ. 5.25ರಲ್ಲೇ ಯಥಾಸ್ಥಿತಿ ಕಾಯ್ದುಕೊಂಡ RBI, ಜಾಗತಿಕ ಅನಿಶ್ಚಿತತೆ ನಡುವೆ ತಟಸ್ಥ ನಿಲುವು ಮುಂದುವರಿಕೆ..!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!