ಕನ್ಹಯ್ಯಲಾಲ್‌ ಖತಿಕ್‌ 
ದೇಶ

ಚಿತ್ತೋರಗಢದ 'ಬಪ್ಪಿ ಲಹಿರಿ'ಗೆ 5 ಕೋಟಿ ರೂ ಬೇಡಿಕೆ: ಚಿನ್ನದ ಮನುಷ್ಯನಿಗೆ 'ಬಂಗಾರ' ಧರಿಸಿದಂತೆ ಎಚ್ಚರಿಕೆ!

ಕರೆ ಮಾಡಿದವರು ಗ್ಯಾಂಗ್‌ಸ್ಟರ್‌ ರೋಹಿತ್ ಗೋದರಾ ಗ್ಯಾಂಗಿನವರು ಎಂದು ಹೇಳಿರುವುದಾಗಿ ವರದಿಯಾಗಿದೆ. ಖತಿಕ್‌ ಅವರಿಗೆ ಚಿನ್ನದ ಮೇಲಿರುವ ಪ್ರೀತಿಗಾಗಿ ‘ಚಿತ್ತೋರಗಢದ ಬಪ್ಪಿ ಲಹರಿ’ ಎಂದೂ ಕರೆಯುತ್ತಾರೆ.

ಚಿತ್ತೋರಗಢ: ಸದಾ ಮೈಮೇಲೆ ಚಿನ್ನದ ಆಭರಣಗಳನ್ನು ಧರಿಸಿರುವುದರಿಂದಲೇ ಪ್ರಸಿದ್ಧಿ ಪಡೆದಿರುವ ರಾಜಸ್ಥಾನದ ಚಿತ್ತೋರಗಢದ ಹಣ್ಣಿನ ವ್ಯಾಪಾರಿ ಕನ್ಹಯ್ಯಲಾಲ್‌ ಖತಿಕ್‌ ಎಂಬುವವರಿಗೆ 5 ಕೋಟಿ ನೀಡುವಂತೆ ಬೆದರಿಕೆ ಕರೆ ಬಂದಿದೆ.

ಕರೆ ಮಾಡಿದವರು ಗ್ಯಾಂಗ್‌ಸ್ಟರ್‌ ರೋಹಿತ್ ಗೋದರಾ ಗ್ಯಾಂಗಿನವರು ಎಂದು ಹೇಳಿರುವುದಾಗಿ ವರದಿಯಾಗಿದೆ. ಖತಿಕ್‌ ಅವರಿಗೆ ಚಿನ್ನದ ಮೇಲಿರುವ ಪ್ರೀತಿಗಾಗಿ ‘ಚಿತ್ತೋರಗಢದ ಬಪ್ಪಿ ಲಹರಿ’ ಎಂದೂ ಕರೆಯುವುದುಂಟು. ಎರಡು ದಿನದ ಹಿಂದೆ ಮಿಸ್ಡ್‌ ಕಾಲ್‌ ಬಂದಿತ್ತು. ನಂತರ ವಾಟ್ಸ್‌ಆ್ಯಪ್‌ ಮೂಲಕ ಅದೇ ಸಂಖ್ಯೆಯಿಂದ ಕರೆ ಬಂದಿತ್ತು. ಅವುಗಳನ್ನು ಸ್ವೀಕರಿಸದ ಖತಿಕ್‌ಗೆ ನಂತರ ಧ್ವನಿ ಸಂದೇಶ ಕಳುಹಿಸಲಾಗಿತ್ತು.

‘ಮುಂದೆ ಎಂದೂ ಚಿನ್ನವನ್ನು ಧರಿಸುವಂತಿಲ್ಲ. ಒಪ್ಪದಿದ್ದರೆ ₹5 ಕೋಟಿ ಪರಿಹಾರ ನೀಡಬೇಕು’ ಎಂದು ಬೆದರಿಕೆಯೊಡ್ಡಲಾಗಿತ್ತು. ಈ ಕುರಿತು ಖತಿಕ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

50 ವರ್ಷಗಳ ಹಿಂದೆ ತಳ್ಳು ಗಾಡಿ ಮೂಲಕ ತರಕಾರಿ ಹಣ್ಣು ಮಾರುತ್ತಿದ್ದ ಕನ್ಹಯ್ಯಲಾಲ್‌ ಖತಿಕ್‌ ಬಳಿ ಇಂದು ಬರೋಬ್ಬರಿ 3.5 ಕೆ.ಜಿ. ಚಿನ್ನವಿದೆ. ಇದರಿಂದಾಗಿಯೇ ಅವರನ್ನು ‘ಚಿತ್ತೋರಗಢದ ಚಿನ್ನದ ಮನುಷ್ಯ’ ಎಂದೇ ಕರೆಯಲಾಗುತ್ತದೆ.

ಬಿಕಾನೆರ್ ಮೂಲದವನಾದ ಗೊದರಾ, ಕೆನಡಾದಲ್ಲಿ ನೆಲೆಸಿದ್ದಾರೆ ಎಂದೆನ್ನಲಾಗಿದೆ. ಈತನ ಮೇಲೆ ಭಾರತದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 32 ಪ್ರಕರಣಗಳಿವೆ. ರ‍್ಯಾಪರ್ ಸಿದ್ದು ಮೂಸೆವಾಲಾ ಕೊಲೆ ಪ್ರಕರಣವೂ ಅವುಗಳಲ್ಲಿ ಒಂದು. ಪವನ್‌ ಕುಮಾರ್‌ ಎಂಬ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್‌ ಪಡೆದು 2022ರಲ್ಲಿ ಈತ ದೆಹಲಿಯಿಂದ ದುಬೈಗೆ ಪರಾರಿಯಾದ. ಈತನ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT