ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ದೇಶ

ಮೋದಿಜೀ, ಭಾರತದ ಮಕ್ಕಳು ಉಸಿರು ಕಟ್ಟುತ್ತಿದ್ದಾರೆ..: Video ಹಂಚಿಕೊಂಡು ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ!

ವಾಯುಮಾಲಿನ್ಯ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದು, ಮೋದಿ ಸರ್ಕಾರ ಈ ವಿಷಯದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಮೋದಿಜೀ, ದೇಶದ ಮಕ್ಕಳು ನಮ್ಮ ಮುಂದೆ ಉಸಿರು ಕಟ್ಟುತ್ತಿದ್ದಾರೆ. ನೀವು ಹೇಗೆ ಮೌನವಾಗಿರಲು ಸಾಧ್ಯ? ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಹೌದು. ರಾಷ್ಟ್ರ ರಾಜಧಾನಿಯಲ್ಲಿನ ವಾಯು ಮಾಲಿನ್ಯದ ವಿಷಯದ ಬಗ್ಗೆ ಸಂಸತ್ತಿನಲ್ಲಿ ವಿವರವಾದ ಚರ್ಚೆಗೆ ಒತ್ತಾಯಿಸಿದ್ದು, ಈ "ಆರೋಗ್ಯ ತುರ್ತುಸ್ಥಿತಿ" ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಾಯುಮಾಲಿನ್ಯ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದು, ಮೋದಿ ಸರ್ಕಾರ ಈ ವಿಷಯದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ. ತಮ್ಮ ನಿವಾಸದಲ್ಲಿ ಕೆಲವು ತಾಯಂದಿರನ್ನು ಭೇಟಿಯಾಗಿರುವ ರಾಹುಲ್ ಗಾಂಧಿ, ಅವರೊಂದಿಗೆ ಸಂಭಾಷಣೆಯ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಾನು ಭೇಟಿಯಾದ ಪ್ರತಿಯೊಬ್ಬ ತಾಯಿಯೂ ನನಗೆ ಇದೇ ಮಾತನ್ನು ಹೇಳುತ್ತಿದ್ದಾರೆ. ಆಕೆಯ ಮಗು ವಿಷಕಾರಿ ಗಾಳಿಯನ್ನು ಸೇವಿಸುತ್ತಾ ಬೆಳೆಯುತ್ತಿದ್ದು, ಅವರು ಹೆದರುತ್ತಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ಮೋದಿ ಜೀ, ಭಾರತದ ಮಕ್ಕಳು ನಮ್ಮ ಮುಂದೆ ಉಸಿರು ಕಟ್ಟುತ್ತಿದ್ದಾರೆ. ನೀವು ಹೇಗೆ ಮೌನವಾಗಿರಲು ಸಾಧ್ಯ? ನಿಮ್ಮ ಸರ್ಕಾರ ಯಾಕೆ ಯಾವುದೇ ತುರ್ತು, ಯೋಜನೆ, ಹೊಣೆಗಾರಿಕೆಯನ್ನು ತೋರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ವಾಯು ಮಾಲಿನ್ಯದ ಕುರಿತು ಸಂಸತ್ತಿನಲ್ಲಿ ವಿವರವಾದ ಚರ್ಚೆ ನಡೆಯಬೇಕಾಗಿದೆ.ಈ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಕಠಿಣ ಯೋಜನೆ ಅಗತ್ಯವಿದೆ. ನಮ್ಮ ಮಕ್ಕಳು ಶುದ್ಧ ಗಾಳಿಗೆ ಅರ್ಹರು. ನೆಪಗಳು ಮತ್ತು ಗೊಂದಲಗಳಲ್ಲ" ಎಂದು ಅವರು ಪ್ರತಿಪಾದಿಸಿದ್ದಾರೆ.

ಕಳೆದ 15 ದಿನಗಳಿಂದ ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರಗತಿಯಲ್ಲಿ ಹದಗೆಟ್ಟಿದೆ. ಮುಂಬರುವ ವಾರದಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಇದರಿಂದಾಗಿ ವಿಶೇಷವಾಗಿ ಧೂಮಪಾನಿಗಳು, ಆಸ್ತಮಾ ರೋಗಿಗಳು, ಮಕ್ಕಳು ಮತ್ತು ಹೃದಯ ಅಥವಾ ಉಸಿರಾಟದ ಕಾಯಿಲೆಗಳಿರುವ ಜನರು ಅನಾರೋಗ್ಯಕ್ಕೀಡಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT