ಪ್ರಾತಿನಿಧಿಕ ಚಿತ್ರ 
ದೇಶ

ಜಾರ್ಖಂಡ್‌: ಮಾವೋವಾದಿ ವಿರೋಧಿ ಕಾರ್ಯಾಚರಣೆ ವೇಳೆ ವಿಷಪೂರಿತ ಹಾವು ಕಡಿದು ಸಿಆರ್‌ಪಿಎಫ್ ಯೋಧ ಸಾವು!

ಸಾರಂಡಾ ಅರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಚೈಬಾಸಾ ಎಸ್ಪಿ ಅಮಿತ್ ರೇಣು ದೃಢಪಡಿಸಿದ್ದಾರೆ.

ರಾಂಚಿ: ಪಶ್ಚಿಮ ಸಿಂಗ್‌ಭೂಮ್‌ನ ಸಾರಂಡಾ ಕಾಡಿನಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಹಾವು ಕಚ್ಚಿದ ನಂತರ ಸಿಆರ್‌ಪಿಎಫ್ ಯೋಧ ಸಾವಿಗೀಡಾಗಿದ್ದಾರೆ.

ಜಾರ್ಖಂಡ್ ಪೊಲೀಸ್ ಪ್ರಧಾನ ಕಚೇರಿಯಿಂದ ಬಂದ ಮಾಹಿತಿ ಪ್ರಕಾರ, 209 ಕೋಬ್ರಾ ಬೆಟಾಲಿಯನ್ ಸಾರಂಡಾದ ಛೋಟಾ ನಗರ ಕಾಡುಗಳಲ್ಲಿ ಮಾವೋವಾದಿಗಳ ವಿರುದ್ಧ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು.

ಈವೇಳೆ, ಉತ್ತರ ಪ್ರದೇಶದ ದಿಯೋರಿಯಾ ಮೂಲದ ಕಾನ್‌ಸ್ಟೆಬಲ್ ಸಂದೀಪ್ ಕುಮಾರ್ ಅವರಿಗೆ ವಿಷಪೂರಿತ ಹಾವು ಕಚ್ಚಿದೆ. ಹಾವು ಕಡಿತದ ಬಗ್ಗೆ ಮಾಹಿತಿ ಪಡೆದ ತಕ್ಷಣ, ಅವರನ್ನು ಕೊಲೆಬಿರಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಂದೀಪ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಮೃತದೇಹವನ್ನು ರಸ್ತೆ ಮೂಲಕ ರಾಂಚಿಗೆ ತರಲಾಗುತ್ತಿದ್ದು, ಅಲ್ಲಿ ಅವರಿಗೆ ಅಂತಿಮ ನಮನ ಸಲ್ಲಿಸಲಾಗುವುದು. ನಂತರ, ಅವರ ಮೃತದೇಹವನ್ನು ಉತ್ತರ ಪ್ರದೇಶದ ಅವರ ಹುಟ್ಟೂರಿಗೆ ಕಳುಹಿಸಲಾಗುವುದು.

ಸಾರಂಡಾ ಅರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಚೈಬಾಸಾ ಎಸ್ಪಿ ಅಮಿತ್ ರೇಣು ದೃಢಪಡಿಸಿದ್ದಾರೆ.

ಹಾವುಗಮನಾರ್ಹವಾಗಿ, ಹಾವುಗಳು, ಚೇಳುಗಳು, ಸೊಳ್ಳೆಗಳು ಮತ್ತು ಮಿಂಚು-ಗುಡುಗು ಮಾವೋವಾದಿಗಳಿಗಿಂತ ಹೆಚ್ಚು ಸವಾಲಿನವು ಎಂದು ಸಾಬೀತಾಗಿದೆ.

ಎಸ್ಪಿ ಪ್ರಕಾರ, ಸಾರಂಡಾ ಕಾಡುಗಳಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳ ಸಮಯದಲ್ಲಿ ಈ ಹಿಂದೆ ಹಲವಾರು ಹಾವು ಕಡಿತದ ಘಟನೆಗಳು ನಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT