ಟಿವಿಕೆ ಮುಖ್ಯಸ್ಥ ವಿಜಯ್ 
ದೇಶ

Karur stampede: ತಮಿಳುನಾಡಿನಾದ್ಯಂತ ಯೋಜಿಸಿದ್ದ ಟಿವಿಕೆಯ ಎಲ್ಲ ಸಾರ್ವಜನಿಕ ಸಭೆಗಳು ಮುಂದೂಡಿಕೆ!

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರ ಪಕ್ಷವೂ ರಾಜ್ಯಾದ್ಯಂತ ಪ್ರಚಾರವನ್ನು ಆರಂಭಿಸಿತ್ತು.

ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣದ ನಂತರ ತಮಿಳುನಾಡಿನಾದ್ಯಂತ ಯೋಜಿಸಿದ್ದ ಸಾರ್ವಜನಿಕ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ಬುಧವಾರ ಘೋಷಿಸಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರು ರಾಜ್ಯಾದ್ಯಂತ ಪ್ರವಾಸ ಕಾರ್ಯಕ್ರಮವನ್ನು ಆರಂಭಿಸಿದ್ದರು. ಜನರನ್ನು ಭೇಟಿ ಮಾಡಲು ಹಲವು ಕಡೆಗಳಲ್ಲಿ ರ‍್ಯಾಲಿ ನಡೆಸಲು ಉದ್ದೇಶಿಸಿದ್ದರು. ಇಲ್ಲಿಯವರೆಗೂತಿರುಚಿರಾಪಳ್ಳಿ, ನಾಮಕ್ಕಲ್ ಮತ್ತು ಕರೂರಿಗೆ ಭೇಟಿ ನೀಡಿದ್ದಾರೆ.

ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ಟಿವಿಕೆ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ41 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಗಳಿಗೆ ಟಿವಿಕೆ ಪಕ್ಷ ತಲಾ ರೂ.20 ಲಕ್ಷ ಪರಿಹಾರ ಘೋಷಿಸಿತ್ತು. ಈ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರ ಯೋಜಿಸಲಾಗಿದ್ದ ಸಾರ್ವಜನಿಕ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ನಮ್ಮ 41 ಸಹೋದರನ್ನು ಕಳೆದುಕೊಂಡಿದ್ದಕ್ಕೆ ನಾವು ದು:ಖ ಮತ್ತು ವಿಷಾದದಲ್ಲಿದ್ದೇವೆ. ಈ ಪರಿಸ್ಥಿತಿಯಲ್ಲಿ ನಮ್ಮ ನಾಯಕ ವಿಜಯ್ ಅವರ ಮುಂದಿನ ಎರಡು ವಾರಗಳ ಜನರ ಭೇಟಿ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗುತ್ತಿದೆ. ಇವುಗಳ ಪರಿಷ್ಕೃತ ವಿವರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಟಿವಿಕೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT