ಟಿವಿಕೆ ಮುಖ್ಯಸ್ಥ ವಿಜಯ್ 
ದೇಶ

Karur stampede: ತಮಿಳುನಾಡಿನಾದ್ಯಂತ ಯೋಜಿಸಿದ್ದ ಟಿವಿಕೆಯ ಎಲ್ಲ ಸಾರ್ವಜನಿಕ ಸಭೆಗಳು ಮುಂದೂಡಿಕೆ!

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರ ಪಕ್ಷವೂ ರಾಜ್ಯಾದ್ಯಂತ ಪ್ರಚಾರವನ್ನು ಆರಂಭಿಸಿತ್ತು.

ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣದ ನಂತರ ತಮಿಳುನಾಡಿನಾದ್ಯಂತ ಯೋಜಿಸಿದ್ದ ಸಾರ್ವಜನಿಕ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ಬುಧವಾರ ಘೋಷಿಸಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರು ರಾಜ್ಯಾದ್ಯಂತ ಪ್ರವಾಸ ಕಾರ್ಯಕ್ರಮವನ್ನು ಆರಂಭಿಸಿದ್ದರು. ಜನರನ್ನು ಭೇಟಿ ಮಾಡಲು ಹಲವು ಕಡೆಗಳಲ್ಲಿ ರ‍್ಯಾಲಿ ನಡೆಸಲು ಉದ್ದೇಶಿಸಿದ್ದರು. ಇಲ್ಲಿಯವರೆಗೂತಿರುಚಿರಾಪಳ್ಳಿ, ನಾಮಕ್ಕಲ್ ಮತ್ತು ಕರೂರಿಗೆ ಭೇಟಿ ನೀಡಿದ್ದಾರೆ.

ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ಟಿವಿಕೆ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ41 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಗಳಿಗೆ ಟಿವಿಕೆ ಪಕ್ಷ ತಲಾ ರೂ.20 ಲಕ್ಷ ಪರಿಹಾರ ಘೋಷಿಸಿತ್ತು. ಈ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರ ಯೋಜಿಸಲಾಗಿದ್ದ ಸಾರ್ವಜನಿಕ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ನಮ್ಮ 41 ಸಹೋದರನ್ನು ಕಳೆದುಕೊಂಡಿದ್ದಕ್ಕೆ ನಾವು ದು:ಖ ಮತ್ತು ವಿಷಾದದಲ್ಲಿದ್ದೇವೆ. ಈ ಪರಿಸ್ಥಿತಿಯಲ್ಲಿ ನಮ್ಮ ನಾಯಕ ವಿಜಯ್ ಅವರ ಮುಂದಿನ ಎರಡು ವಾರಗಳ ಜನರ ಭೇಟಿ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗುತ್ತಿದೆ. ಇವುಗಳ ಪರಿಷ್ಕೃತ ವಿವರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಟಿವಿಕೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT