ಪ್ರಧಾನಿ ಮೋದಿ 
ದೇಶ

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಭಾರತದ ಆತ್ಮವಾಗಿದೆ. ಒಂದು ವೇಳೆ ಈ ತತ್ವಕ್ಕೆ ಧಕ್ಕೆ ಉಂಟಾದರೆ ದೇಶದ ಶಕ್ತಿ ದುರ್ಬಲಗೊಳ್ಳುತ್ತದೆ ಎಂದರು.

ನವದೆಹಲಿ: ದೇಶದಲ್ಲಿ ಹಿಂದೂಗಳ ಸಂಖ್ಯೆಯಲ್ಲಿ ಕುಸಿತದ ವರದಿ ನಡುವೆ ಭಾರತದ ಸಾಮಾಜಿಕ ಸಾಮರಸ್ಯಕ್ಕೆ ಒಳನುಸುಳುವಿಕೆಗಿಂತ ಜನಸಂಖ್ಯೆ ಕುರಿತ ತಿರುಚುವಿಕೆಯು ( Demographic manipulation) ಇಂದು ದೊಡ್ಡ ಅಪಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಭಾರತದ ಆತ್ಮವಾಗಿದೆ. ಒಂದು ವೇಳೆ ಈ ತತ್ವಕ್ಕೆ ಧಕ್ಕೆ ಉಂಟಾದರೆ ದೇಶದ ಶಕ್ತಿ ದುರ್ಬಲಗೊಳ್ಳುತ್ತದೆ ಎಂದರು.

ನುಸುಳುಕೋರರ ವಿರುದ್ಧ ಭಾರತೀಯ ನಾಗರಿಕರನ್ನು ರಕ್ಷಿಸಲು ಆಗಸ್ಟ್ 15ರ ಭಾಷಣದಲ್ಲಿ 'ಜನಸಂಖ್ಯಾ ಮಿಷನ್' ಘೋಷಿಸಿದ್ದನ್ನು ನೆನಪಿಸಿಕೊಂಡ ಪ್ರದಾನಿ, ಇಂದು ನಮ್ಮ ಏಕತೆ, ಸಂಸ್ಕೃತಿ ಮತ್ತು ಭದ್ರತೆ ಮೇಲೆ ನೇರವಾಗಿ ದಾಳಿ ಮಾಡುವ ಕೆಲಸಗಳು ನಡೆಯುತ್ತಿದೆ ಎಂದು ಹೇಳಿದರು.

ಆರ್‌ಎಸ್‌ಎಸ್ ನಿರಂತರವಾಗಿ ಸಾಮಾಜಿಕ ಸಾಮರಸ್ಯ, ವಂಚಿತರಿಗೆ ಆದ್ಯತೆ ನೀಡಿದೆ.ರಾಷ್ಟ್ರವು ಇಂದು ಪ್ರತ್ಯೇಕತಾವಾದಿ ಸಿದ್ಧಾಂತ, ಪ್ರಾದೇಶಿಕತೆಗಳಿಂದ ಹಿಡಿದು ಜಾತಿ, ಭಾಷೆಯ ವಿವಾದಗಳು ಮತ್ತು ಬಾಹ್ಯ ಶಕ್ತಿಗಳಿಂದ ಪ್ರಚೋದಿಸುವ ವಿಭಜಕಶಕ್ತಿಗಳವರೆಗೆ ತನ್ನ ಏಕತೆ, ಸಂಸ್ಕೃತಿ ಮತ್ತು ಭದ್ರತೆಯ ಸವಾಲುಗಳನ್ನು ಎದುರಿಸುತ್ತಿದೆ ಎಂದರು.

ವಿವಿಧತೆಯಲ್ಲಿ ಏಕತೆ ಭಾರತದ ಆತ್ಮವಾಗಿದೆ. ಈ ತತ್ವಕ್ಕೆ ಧಕ್ಕೆ ಉಂಟಾದರೆ ಭಾರತದ ಶಕ್ತಿ ಕುಗ್ಗುತ್ತದೆ. ಹೀಗಾಗಿ ಅಡಿಪಾಯದ ತತ್ವವನ್ನು ನಿರಂತರವಾಗಿ ಬಲಪಡಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT