ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ 
ದೇಶ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಣ್ಯದಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿದೆ. ಈ ನಾಣ್ಯದ ಮೇಲೆ ಸಂಘದ ಧ್ಯೇಯವಾಕ್ಯ "ರಾಷ್ಟ್ರಾಯ ಸ್ವಾಹಾ, ಇದಂ ರಾಷ್ಟ್ರಾಯ, ಇದಂ ನ ಮಮ ಸಹ ಬರೆಯಲಾಗಿದೆ.

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು ರೂ.100 ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.

100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನ, ಇನ್ನೊಂದು ಬದಿಯಲ್ಲಿ ಸಿಂಹ, ಅಭಯ ಮುದ್ರೆಯಲ್ಲಿರುವ ಭಾರತ ಮಾತೆಯ ಚಿತ್ರ ಮತ್ತು ಸ್ವಯಂಸೇವಕರು ಭಕ್ತಿಯಿಂದ ನಮಸ್ಕರಿಸುವ ಚಿತ್ರವಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಣ್ಯದಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿದೆ. ಈ ನಾಣ್ಯದ ಮೇಲೆ ಸಂಘದ ಧ್ಯೇಯವಾಕ್ಯ "ರಾಷ್ಟ್ರಾಯ ಸ್ವಾಹಾ, ಇದಂ ರಾಷ್ಟ್ರಾಯ, ಇದಂ ನ ಮಮ ಸಹ ಬರೆಯಲಾಗಿದೆ.

ಅಂದರೆ ಎಲ್ಲಾವನ್ನು ರಾಷ್ಟ್ರಕ್ಕೆ ಸಮರ್ಪಿಸುತ್ತೇನೆ. ಎಲ್ಲವೂ ರಾಷ್ಟ್ರದು, ನನ್ನದು ಏನು ಇಲ್ಲ ಎಂಬುದು ಇದರ ಅರ್ಥವಾಗಿದೆ.

ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾದ ಬಳಿಕ ಸಂಘ ಮಹಾನ್ ಉದ್ದೇಶದೊಂದಿಗೆ ಮುನ್ನಡೆಯುತ್ತಾ ಬಂದಿದೆ. ಈ ಉದ್ದೇಶವೇ ರಾಷ್ಟ್ರ ನಿರ್ಮಾಣ! ಸಂಘದ ಸ್ವಯಂ ಸೇವಕರು ಸಾಂವಿಧಾನಿಕ ಮೌಲ್ಯಗಳ ನಂಬಿಕೆಯಿಂದ ಮಾರ್ಗದರ್ಶನ ಪಡೆದು ಸಮಾಜದೆಡೆಗೆ ಸದಾ ಕಾರ್ಯತತ್ಪರರಾಗಿದ್ದಾರೆ ಮತ್ತು ಬದ್ಧರಾಗಿದ್ದಾರೆ ಎಂದರು.

ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತನ್ನ ಛಾಪು ಮೂಡಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘವು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿದೆ. ಸಂಘದ ಸ್ವಯಂಸೇವಕರು ಶಿಕ್ಷಣ, ಆರೋಗ್ಯ, ವಿಪತ್ತು ನಿರ್ವಹಣೆಯಲ್ಲಿ ಕೊಡುಗೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಬಳ್ಳಾರಿ ಫೈರಿಂಗ್: ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಗಂಡನಿಲ್ಲದಾಗ ಪ್ರೇಮಿಯನ್ನು ಕರೆಸಿಕೊಂಡ ವಿವಾಹಿತೆ ಮಾಡಿದ್ದು ಘೋರ ಕೃತ್ಯ: ಮರ್ಮಾಂಗ ಕಳೆದುಕೊಂಡು ವ್ಯಕ್ತಿ ನರಳಾಟ!

'ನೆರೆಹೊರೆಯವರು ಕೆಟ್ಟವ್ರು, ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್‌ ಖಡಕ್ ವಾರ್ನಿಂಗ್

SCROLL FOR NEXT