ನರೇಂದ್ರ ಮೋದಿ-ಮೋಹನ್ ಭಾಗವತ್  
ದೇಶ

ಸಮಾಜ, ರಾಷ್ಟ್ರ ನಿರ್ಮಾಣದ ಗುರಿ: RSS ನ 100 ವರ್ಷಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 100 ವರ್ಷಗಳ ಹಿಂದೆ ವಿಜಯ ದಶಮಿಯಂದು RSS ಸ್ಥಾಪನೆಗೊಂಡಿದ್ದನ್ನು ಅವರು ಇಂದು ಸ್ಮರಿಸಿಕೊಂಡಿದ್ದಾರೆ.

ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.

ಇಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, 100 ವರ್ಷಗಳ ಹಿಂದೆ ವಿಜಯ ದಶಮಿಯಂದು, RSS ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುವ ಗುರಿಯೊಂದಿಗೆ ಹುಟ್ಟಿಕೊಂಡಿತು. ನೂರು ವರ್ಷಗಳಿಗೂ ಹೆಚ್ಚು ಕಾಲ, ಅಸಂಖ್ಯಾತ ಸ್ವಯಂಸೇವಕರು ಈ ದೃಷ್ಟಿಕೋನವನ್ನು ಈಡೇರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಬರೆದುಕೊಂಡಿದ್ದಾರೆ.

ಪುಣೆಯಲ್ಲಿ ಆರ್‌ಎಸ್‌ಎಸ್ 'ಪಥ ಸಂಚಲನ'ವನ್ನು ನಡೆಯಿತು. ಸಚಿವ ಚಂದ್ರಕಾಂತ್ ಪಾಟೀಲ್, ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಮತ್ತು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಭಾಗವಹಿಸಿದ್ದರು. ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies, ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

SCROLL FOR NEXT