ನವದೆಹಲಿ: ವಿಜಯದಶಮಿ ಹಬ್ಬವು ದುಷ್ಟತನ ಮತ್ತು ಸುಳ್ಳಿನ ಮೇಲೆ ಸತ್ಯ ಹಾಗೂ ಒಳಿತಿನ ವಿಜಯವನ್ನು ಪ್ರತಿನಿಧಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮೂಲಕ ದೇಶದ ಜನತೆಗೆ ವಿಜಯದಶಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ವಿಜಯದಶಮಿ ಕೆಟ್ಟದ್ದು ಮತ್ತು ಅಸತ್ಯದ ಮೇಲೆ ಒಳ್ಳೆಯ ಮತ್ತು ಸತ್ಯದ ವಿಜಯದ ಸಂಕೇತವಾಗಿದೆ. ಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಫೂರ್ತಿಯನ್ನು ಪಡೆಯಲಿ ಎಂಬುದು ನನ್ನ ಆಶಯ. ದೇಶಾದ್ಯಂತ ನನ್ನ ಕುಟುಂಬ ಸದಸ್ಯರಿಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ