ದೇಶ

ಐದು ವರ್ಷಗಳ ನಂತರ, ಅಕ್ಟೋಬರ್ 26 ರಿಂದ ಭಾರತ-ಚೀನಾ ನೇರ ವಿಮಾನಯಾನ ಪುನರಾರಂಭ

ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ.

ನವದೆಹಲಿ: ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಅಕ್ಟೋಬರ್ 26 ರಿಂದ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಸಮ್ಮತಿಸಿವೆ.

ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ.

ಅಕ್ಟೋಬರ್‌ 26 ರಿಂದ ಕೋಲ್ಕತ್ತಾದಿಂದ ಗುವಾಂಗ್‌ಝೌಗೆ ಪ್ರತಿನಿತ್ಯ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ. ಮೂಲಗಳ ಪ್ರಕಾರ ಏರ್ ಇಂಡಿಯಾ ವರ್ಷಾಂತ್ಯದ ವೇಳೆಗೆ ಚೀನಾಕ್ಕೆ ತನ್ನ ವಿಮಾನ ಸೇವೆಗಳನ್ನು ಪುನರಾರಂಭಿಸುವ ಸಾಧ್ಯತೆಯಿದೆ. ಕೋವಿಡ್ -19 ಸಾಂಕ್ರಾಮಿಕ ರೋಗ ಬಂದ ನಂತರ ಸ್ಥಗಿತಗೊಂಡಿದ್ದ ವಿಮಾನ ಹಾರಾಟ ಮತ್ತೇ ಆರಂಭಗೊಂಡಿರಲಿಲ್ಲ.

ಇಂಡಿಗೋ ವಿಮಾನಯಾನ ಸಂಸ್ಥೆ ಅಕ್ಟೋಬರ್ 26 ರಂದು ದೆಹಲಿ ಮತ್ತು ಕೋಲ್ಕತ್ತಾದಿಂದ ಗುವಾಂಗ್‌ಝೌಗೆ ದೈನಂದಿನ ವಿಮಾನಗಳನ್ನು ಪ್ರಾರಂಭಿಸಲಿದೆ, ಆದರೆ ಫೆಬ್ರವರಿ 2020 ರಲ್ಲಿ ಕೊನೆಯದಾಗಿ ಚೀನಾಕ್ಕೆ ಹಾರಾಟ ನಡೆಸಿದ ಏರ್ ಇಂಡಿಯಾ, ವರ್ಷಾಂತ್ಯದ ವೇಳೆಗೆ ತನ್ನ ದೆಹಲಿ-ಶಾಂಘೈ ಸೇವೆಯನ್ನು ಪುನರಾರಂಭಿಸಲು ಯೋಜಿಸಿದೆ.

ವಾಯುಯಾನ ಸಚಿವಾಲಯವು, "ಭಾರತ ಮತ್ತು ಚೀನಾ ಚಳಿಗಾಲದ ವೇಳಾಪಟ್ಟಿಗೆ ಅನುಗುಣವಾಗಿ ಅಕ್ಟೋಬರ್ 2025 ರ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸುತ್ತವೆ. ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸುವ ವಿಶಾಲ ಪ್ರಯತ್ನಗಳ ಭಾಗವಾಗಿ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವೆ ನಿರಂತರ ತಾಂತ್ರಿಕ ಮಟ್ಟದ ಒಪ್ಪಂದವಾಗಿದೆ.

ಈ ಕ್ರಮವು ವಾಯು ಸಂಪರ್ಕವನ್ನು ಹೆಚ್ಚಿಸುತ್ತದೆ, ಜನರಿಂದ ಜನರಿಗೆ ವಿನಿಮಯವನ್ನು ಬೆಂಬಲಿಸುತ್ತದೆ ಮತ್ತು ಎರಡೂ ದೇಶಗಳ ನಡುವಿನ ಆರ್ಥಿಕ ಸಹಯೋಗವನ್ನು ಬಲಪಡಿಸುತ್ತದೆ.

ಇಂಡಿಗೋ ತನ್ನ ಗುವಾಂಗ್‌ಝೌ ವಿಮಾನಗಳ ಮೂಲಕ ಭಾರತೀಯ ಮಾರುಕಟ್ಟೆಗೆ ಚೀನಾದಿಂದ ಉತ್ಪನ್ನಗಳನ್ನು ಪಡೆಯುವ ಗುರಿ ಹೊಂದಿದೆ, ಆದರೆ ಏರ್ ಇಂಡಿಯಾ ಶಾಂಘೈಗೆ ಕಾರ್ಯನಿರ್ವಹಿಸುವ ಮೂಲಕ ವ್ಯಾಪಾರ ಸಮುದಾಯ ಮತ್ತು ವಿದ್ಯಾರ್ಥಿಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ ಎಂದು ಮೂಲವೊಂದು ತಿಳಿಸಿದೆ.

ನಿಯಂತ್ರಕ ಅನುಮೋದನೆಗಳಿಗೆ ಒಳಪಟ್ಟು, ಇಂಡಿಗೋ ಶೀಘ್ರದಲ್ಲೇ ದೆಹಲಿ ಮತ್ತು ಗುವಾಂಗ್‌ಝೌ ನಡುವೆ ನೇರ ವಿಮಾನಗಳನ್ನು ಪರಿಚಯಿಸಲಿದೆ... ಈ ವಿಮಾನಗಳು ಗಡಿಯಾಚೆಗಿನ ವ್ಯಾಪಾರ ಮತ್ತು ಕಾರ್ಯತಂತ್ರದ ವ್ಯಾಪಾರ ಪಾಲುದಾರಿಕೆಗಳಿಗೆ ಮಾರ್ಗಗಳನ್ನು ಪುನಃ ಸ್ಥಾಪಿಸುತ್ತವೆ ಮತ್ತು ಎರಡು ರಾಷ್ಟ್ರಗಳ ನಡುವೆ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT