ಸಾಂದರ್ಭಿಕ ಚಿತ್ರ 
ದೇಶ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ಕೋಲ್ಡ್ರಿಫ್ ಸಿರಪ್‌ನ ಒಂದು ಬ್ಯಾಚ್‌ನಲ್ಲಿ ದೋಷ ಇರುವ ಬಗ್ಗೆ ಇತರ ರಾಜ್ಯಗಳ ವರದಿಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ತಿರುವನಂತಪುರಂ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ರಾಜ್ಯ ಔಷಧ ನಿಯಂತ್ರಣ ಇಲಾಖೆ ನಿಷೇಧಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ.

ಕೋಲ್ಡ್ರಿಫ್ ಸಿರಪ್‌ನ ಒಂದು ಬ್ಯಾಚ್‌ನಲ್ಲಿ ದೋಷ ಇರುವ ಬಗ್ಗೆ ಇತರ ರಾಜ್ಯಗಳ ವರದಿಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಔಷಧ ನಿಯಂತ್ರಣ ಇಲಾಖೆ ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ, ಈ ಔಷಧದ ಫ್ಲ್ಯಾಗ್ ಮಾಡಲಾದ ಬ್ಯಾಚ್ ಅನ್ನು ಕೇರಳದಲ್ಲಿ ಮಾರಾಟ ಮಾಡಲಾಗಿಲ್ಲ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಆದಾಗ್ಯೂ, ಸುರಕ್ಷತೆಯ ಕಾಳಜಿಯಿಂದ, ಕೋಲ್ಡ್ರಿಫ್ ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಲು ಔಷಧ ನಿರೀಕ್ಷಕರಿಗೆ ಔಷಧ ನಿಯಂತ್ರಕರು ಸೂಚಿಸಿದ್ದಾರೆ" ಎಂದು ಅವರು ಹೇಳಿದ್ದಾರೆ.

ಈ ಔಷಧವನ್ನು ಕೇರಳದಲ್ಲಿ ಎಂಟು ವಿತರಕರ ಮೂಲಕ ಮಾರಾಟ ಮಾಡಲಾಗುತ್ತಿದೆ. ಈ ಎಲ್ಲಾ ಕೇಂದ್ರಗಳಿಗೆ ವಿತರಣೆ ಮತ್ತು ಮಾರಾಟವನ್ನು ಸ್ಥಗಿತಗೊಳಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದಲ್ಲದೆ, ವೈದ್ಯಕೀಯ ಮಳಿಗೆಗಳ ಮೂಲಕವೂ ಕೋಲ್ಡ್ರಿಫ್ ಸಿರಪ್ ಮಾರಾಟವನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT