ಅಲ್ಕಾ ಲಂಬಾ 
ದೇಶ

ಬಿಹಾರ ಮತದಾರರ ಪಟ್ಟಿಯಿಂದ ದಲಿತ, ಮುಸ್ಲಿಂ ಮಹಿಳೆಯರ ಹೆಸರು ತೆಗೆದುಹಾಕಲಾಗಿದೆ: ಕಾಂಗ್ರೆಸ್

"ಬಿಹಾರದಲ್ಲಿ ಸುಮಾರು 3.5 ಕೋಟಿ ಮಹಿಳಾ ಮತದಾರರಿದ್ದಾರೆ. ಆದರೆ ಸುಮಾರು 23 ಲಕ್ಷ ಮಹಿಳೆಯರ (22.7 ಲಕ್ಷ) ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ".

ನವದೆಹಲಿ: ಬಿಹಾರದಲ್ಲಿ ಎಸ್‌ಐಆರ್ ಅಡಿಯಲ್ಲಿ ಸುಮಾರು 23 ಲಕ್ಷ ಮಹಿಳೆಯರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದ್ದು, ಅವರಲ್ಲಿ ಹೆಚ್ಚಿನವರು 2020ರ ಚುನಾವಣೆಯಲ್ಲಿ "ತೀವ್ರ ಸ್ಪರ್ಧೆ" ಕಂಡ 59 ವಿಧಾನಸಭಾ ಕ್ಷೇತ್ರಕ್ಕೆ ಸೇರಿದ್ದಾರೆ ಎಂದು ಹೇಳಿದೆ.

ತನ್ನ "ಮತ ಚೋರಿ" ಆರೋಪವನ್ನು ಪುನರುಚ್ಚರಿಸಿದ ಕಾಂಗ್ರೆಸ್, ಚುನಾವಣಾ ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಸಮಯದಲ್ಲಿ "ಯೋಜಿತ ಪಿತೂರಿಯ" ಭಾಗವಾಗಿ ಪಟ್ಟಿಯಿಂದ ದಲಿತ ಮತ್ತು ಮುಸ್ಲಿಂ ಮಹಿಳಾ ಮತದಾರರನ್ನು "ಕೈಬಿಟ್ಟಿದೆ" ಎಂದು ಆರೋಪಿಸಿದೆ.

ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಈ ಮಹಿಳೆಯರು ಮತ ಚಲಾಯಿಸಿದಾಗ, ಈ ಮತಗಳು "ಮೋಸದ" ಮತ್ತು "ನಕಲಿ ಮತಗಳಾಗಿದ್ದರೆ", ಅವರಿಂದ ಆಯ್ಕೆಯಾದ ಸಂಸದರು ಸರ್ಕಾರ ರಚಿಸಲು ಸಹಾಯ ಮಾಡಿದ್ದಾರೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇಂದಿರಾ ಭವನದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ, "ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ" ಚುನಾವಣಾ ಆಯೋಗವು ಬಿಹಾರದಲ್ಲಿ ಎಸ್‌ಐಆರ್ ಹೆಸರಿನಲ್ಲಿ "ಭಾರಿ ವಂಚನೆ" ಮಾಡುತ್ತಿದೆ ಎಂದು ಆರೋಪಿಸಿದರು.

"ಬಿಹಾರದಲ್ಲಿ ಸುಮಾರು 3.5 ಕೋಟಿ ಮಹಿಳಾ ಮತದಾರರಿದ್ದಾರೆ. ಆದರೆ ಸುಮಾರು 23 ಲಕ್ಷ ಮಹಿಳೆಯರ (22.7 ಲಕ್ಷ) ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ" ಎಂದು ಅವರು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಮಹಿಳೆಯರು ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಮತ್ತು "ಈ ನಿರ್ಧಾರ ಸಂವಿಧಾನಕ್ಕೆ ವಿರುದ್ಧವಾಗಿದೆ" ಎಂದು ಲಂಬಾ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?