ಜ್ಞಾನೇಶ್ ಕುಮಾರ್, ಮುಖ್ಯ ಚುನಾವಣಾಧಿಕಾರಿ 
ದೇಶ

Bihar Assemebly Election: ಚುನಾವಣಾ ಆಯೋಗದಿಂದ ಸಂಜೆ 4 ಗಂಟೆಗೆ ಮುಹೂರ್ತ ಫಿಕ್ಸ್ !

ಚುನಾವಣಾ ಆಯೋಗವು ಬಿಹಾರದಲ್ಲಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿ, ಮುಕ್ತ, ನ್ಯಾಯಸಮ್ಮತ ಮತ್ತು ಸುಗಮ ಚುನಾವಣೆ ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಇಂದು (ಅ.6) ಸಂಜೆ 4 ಗಂಟೆಗೆ ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟಿಸಲಿದೆ.

ಚುನಾವಣಾ ಆಯೋಗವು ಬಿಹಾರದಲ್ಲಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿ, ಮುಕ್ತ, ನ್ಯಾಯಸಮ್ಮತ ಮತ್ತು ಸುಗಮ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

243 ಸದಸ್ಯ ಬಲದ ರಾಜ್ಯ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳುತ್ತದೆ. ಮುಂಬರುವ ಚುನಾವಣೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ನಡುವಿನ ನೇರ ಸ್ಪರ್ಧೆಯಾಗುವ ನಿರೀಕ್ಷೆಯಿದೆ.

ಬಿಹಾರದಲ್ಲಿ ಸೆ.30ರಂದು ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಪೂರ್ಣಗೊಳಿಸಿದೆ. ಎಸ್‌ಐಆರ್‌ನ ಕೊನೆಯ ಪಟ್ಟಿಯ ಪ್ರಕಾರ, 47 ಲಕ್ಷ ಮತದಾರರು ಕಡಿಮೆಯಾಗಿ ಒಟ್ಟು 7.42 ಕೋಟಿ ಮತದಾರರು ಇದ್ದಾರೆ.

ಆಗಸ್ಟ್‌ನಲ್ಲಿ ಪ್ರಕಟಿಸಿದ್ದ ಕರಡುಪಟ್ಟಿಯಲ್ಲಿ ಗೈರು ಹಾಜರಿ, ಸ್ಥಳಾಂತರ ಅಥವಾ ಮೃತಪಟ್ಟಿದ್ದಾರೆ ಎಂಬ ಕಾರಣಗಳನ್ನು ನೀಡಿ 65 ಲಕ್ಷ ಮತದಾರರ ಹೆಸರುಗಳನ್ನು ಹೊರಗಿಡಲಾಗಿತ್ತು. ಕರಡು ಪಟ್ಟಿಯಲ್ಲಿ ಬಿಟ್ಟುಹೋಗಿದ್ದ 21.53 ಲಕ್ಷ ಅರ್ಹ ಮತದಾರರ ಹೆಸರುಗಳನ್ನು ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ. 243 ಸದಸ್ಯ ಬಲದ ಬಿಹಾರ ರಾಜ್ಯ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳಲಿದೆ.

ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22 ರ ಮೊದಲು, ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದರು.

ಆದರೆ ಅನೇಕ ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ ಆಚರಿಸಲಾಗುವ 'ಛಾತ್ ಪೂಜೆ' ಹಬ್ಬದ ನಂತರ ಚುನಾವಣೆಯನ್ನು ನಡೆಸುವಂತೆ ಆಯೋಗವನ್ನು ಒತ್ತಾಯಿಸಿದ್ದವು. ಇತರ ರಾಜ್ಯಗಳಲ್ಲಿ ಉದ್ಯೋಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಹಬ್ಬಕ್ಕಾಗಿ ಮನೆಗೆ ಮರಳುವುದರಿಂದ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

ಗಾಜಾ಼ದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

ರಾಜ್ಯದಲ್ಲಿ coldrif ಸಿರಪ್ ಸರಬರಾಜು ಆಗಿಲ್ಲ: ಕೆಲವು ಕೆಮ್ಮಿನ ಔಷಧಿಗಳ ಮೇಲೆ ನಿಗಾ ಇಡಲು ಸೂಚನೆ; ದಿನೇಶ್ ಗುಂಡೂರಾವ್

ಇದೆಂಥಾ ಉದ್ಧಟತನ: ಭಾರತದ Gukesh ರ 'ಕಿಂಗ್' ಎಸೆದು ಹಿಕಾರು ನಕಮುರಾ ಸಂಭ್ರಮ! Video Viral

ಮೈದಾನದಲ್ಲೇ ಹೈಡ್ರಾಮಾ: ರನೌಟ್ ಆಗಿ ಕ್ರೀಸ್ ತೊರೆಯದ ಪಾಕ್ ಬ್ಯಾಟರ್ Muneeba Ali, ಬಲವಂತವಾಗಿ ಹೊರಗಟ್ಟಿದ ಅಂಪೈರ್ ಗಳು, ಆಗಿದ್ದೇನು?

SCROLL FOR NEXT