ಸಾಂದರ್ಭಿಕ ಚಿತ್ರ 
ದೇಶ

ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಯುವ ವೇಳೆ BSF ಇನ್ಸ್‌ಪೆಕ್ಟರ್ ಸಾವು

ಭಾರತದಿಂದ ಬಾಂಗ್ಲಾದೇಶಕ್ಕೆ ಜಾನುವಾರು ಕಳ್ಳಸಾಗಣೆದಾರರು ಅಕ್ರಮವಾಗಿ ಎಮ್ಮೆಗಳನ್ನು ಸಾಗಿಸಲು ಯತ್ನಿಸುತ್ತಿರುವುದನ್ನು ಸೈನಿಕರು ಹಾಗೂ ಬಿಎಸ್‌ಎಫ್ ಇನ್ಸ್‌ಪೆಕ್ಟರ್ ಕಪಿಲ್ ದಿಯೋ ಸಿಂಗ್ ಅವರು ಗಮನಿಸಿದರು ಎಂದು ಅವರು ಹೇಳಿದ್ದಾರೆ.

ಮಾಲ್ಡಾ: ಪಶ್ಚಿಮ ಬಂಗಾಳದ ಬಾಂಗ್ಲಾದೇಶದೊಂದಿಗಿನ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಯಲು ಯತ್ನಿಸಿದ 59 ವರ್ಷದ ಗಡಿ ಭದ್ರತಾ ಪಡೆ(ಬಿಎಸ್ಎಫ್) ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 4 ರ ಮಧ್ಯರಾತ್ರಿ ರಾಜ್ಯದ ಮಾಲ್ಡಾ ಜಿಲ್ಲೆಯ ಬಿಎಸ್‌ಎಫ್‌ನ ಆಗ್ರಾ ಗಡಿ ಹೊರಠಾಣೆ(ಬಿಒಪಿ) ಬಳಿ ನಡೆದ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಪಿಟಿಐಗೆ ತಿಳಿಸಿದ್ದಾರೆ.

ಭಾರತದಿಂದ ಬಾಂಗ್ಲಾದೇಶಕ್ಕೆ ಜಾನುವಾರು ಕಳ್ಳಸಾಗಣೆದಾರರು ಅಕ್ರಮವಾಗಿ ಎಮ್ಮೆಗಳನ್ನು ಸಾಗಿಸಲು ಯತ್ನಿಸುತ್ತಿರುವುದನ್ನು ಸೈನಿಕರು ಹಾಗೂ ಬಿಎಸ್‌ಎಫ್ ಇನ್ಸ್‌ಪೆಕ್ಟರ್ ಕಪಿಲ್ ದಿಯೋ ಸಿಂಗ್ ಅವರು ಗಮನಿಸಿದರು ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, ಕಳ್ಳಸಾಗಣೆದಾರರನ್ನು ತಡೆಯಲು ಸೈನಿಕರು ತಮ್ಮ ಪಂಪ್ ಆಕ್ಷನ್ ಗನ್‌ನಿಂದ ಮಾರಕವಲ್ಲದ ಮೂರು ಸುತ್ತು ಗುಂಡು ಹಾರಿಸಿದರು. ಆದರೆ ಅವರು ಭದ್ರತಾ ಸಿಬ್ಬಂದಿಯ ಮೇಲೆ 'ಡಾಹ್' (ದೊಡ್ಡ ಚಾಕು) ಮತ್ತು ಕೋಲುಗಳಂತಹ ತೀಕ್ಷ್ಣವಾದ ಆಯುಧಗಳಿಂದ ದಾಳಿ ಮಾಡಿದರು. ನಂತರ ಬಿಎಸ್ಎಫ್ ನ 88ನೇ ಬೆಟಾಲಿಯನ್‌ಗೆ ಸೇರಿದ ಇನ್ಸ್‌ಪೆಕ್ಟರ್ ಸಿಂಗ್, ಕಳ್ಳಸಾಗಣೆದಾರರನ್ನು ಬೆನ್ನಟ್ಟಿ ಓಡುತ್ತಿದ್ದಾಗ ಅವರು ಜೌಗು ಮತ್ತು ನೀರು ತುಂಬಿದ ಜಾಗದಲ್ಲಿ ಜಾರಿಬಿದ್ದು, ಪ್ರಜ್ಞೆ ತಪ್ಪಿದರು.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಇನ್ಸ್‌ಪೆಕ್ಟರ್‌ಗೆ ಯಾವುದೇ ಬಾಹ್ಯ ಗಾಯಗಳಾಗಿಲ್ಲ ಮತ್ತು ಅವರ ಸಾವಿಗೆ ನಿಖರವಾದ ಕಾರಣವನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT