ಮೋಹನ್ ಭಾಗವತ್ 
ದೇಶ

ಪಿಒಕೆ ನಮ್ಮ ಮನೆ ಇದ್ದಂತೆ; ಕೋಣೆಗೆ ಅಪರಿಚಿತರು ನುಗ್ಗಿದ್ದಾರೆ, ನಾವು ಅದನ್ನು ಮರಳಿ ಪಡೆಯಬೇಕು: ಮೋಹನ್‌ ಭಾಗವತ್‌

ಇಡೀ ಭಾರತ ಒಂದೇ ಮನೆ, ಆದರೆ ಯಾರೋ ನಮ್ಮ ಮನೆಯ ಒಂದು ಕೋಣೆಯನ್ನು ಮನೆಯಿಂದ ಬೇರ್ಪಡಿಸಿದ್ದಾರೆ. ಅಲ್ಲಿ ನನ್ನ ಮೇಜು, ಕುರ್ಚಿ ಮತ್ತು ಬಟ್ಟೆಗಳನ್ನು ಇಡಲಾಗುತ್ತಿತ್ತು. ಅವರು (ಪಾಕ್) ಅದನ್ನು ಆಕ್ರಮಿಸಿಕೊಂಡಿದ್ದಾರೆ

ಭೂಪಾಲ್: ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತ ಎಂಬ ಮನೆಯೊಳಗಿನ ಕೋಣೆ ಇದ್ದಂತೆ, ಆದರೆ ಅಪರಿಚಿತರು ಒಳಗೆ ಬಂದಿದ್ದಾರೆ. ಆ ಕೊಠಡಿ ಮರುವಶ ಮಾಡಿಕೊಳ್ಳಬೇಕು' ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಭಾನುವಾರ ಕರೆ ನೀಡಿದ್ದಾರೆ.

ಮಧ್ಯ ಪ್ರದೇಶದ ಸತ್ನಾದಲ್ಲಿ ಸಿಂಧಿ ಜನಾಂಗದ ಸಭೆಯಲ್ಲಿ ಮಾತನಾಡಿದ ಅವರು, 'ಇಡೀ ಭಾರತ ಒಂದೇ ಮನೆ, ಆದರೆ ಯಾರೋ ನಮ್ಮ ಮನೆಯ ಒಂದು ಕೋಣೆಯನ್ನು ಮನೆಯಿಂದ ಬೇರ್ಪಡಿಸಿದ್ದಾರೆ. ಅಲ್ಲಿ ನನ್ನ ಮೇಜು, ಕುರ್ಚಿ ಮತ್ತು ಬಟ್ಟೆಗಳನ್ನು ಇಡಲಾಗುತ್ತಿತ್ತು. ಅವರು (ಪಾಕ್) ಅದನ್ನು ಆಕ್ರಮಿಸಿಕೊಂಡಿದ್ದಾರೆ. ನಾಳೆ, ನಾನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು' ಎಂದು ಕರತಾಡನದ ಮಧ್ಯೆ ಹೇಳಿದರು.

'ಸಭೆಯಲ್ಲಿ ಅನೇಕ ಸಿಂಧಿ ಸಹೋದರರು ಕುಳಿತಿದ್ದಾರೆ. ನನಗೆ ತುಂಬಾ ಸಂತಸವಾಗಿದೆ. ಅವರು ಪಾಕ್‌ ಗೆ ಹೋಗಲಿಲ್ಲ. ಅವಿಭಜಿತ ಭಾರತಕ್ಕೆ ಬಂದರು. ಪರಿಸ್ಥಿತಿ ವೈಪರಿತ್ಯದ ಕಾರಣ ಅವರು ಈ ಮನೆಗೆ ಆಗಮಿಸಿದರು. ಏಕೆಂದರೆ ಇದೂ ಅವರದ್ದೇ ಮನೆ' ಎಂದು ನುಡಿದರು.

ಈ ಮನೆ ಬೇರೆಯಲ್ಲದ ಕಾರಣ ಸಂದರ್ಭಗಳು ನಮ್ಮನ್ನು ಆ ಮನೆಯಿಂದ ಇಲ್ಲಿಗೆ ಕಳುಹಿಸಿವೆ," ಎಂದು ಅವರು ಹೇಳಿದಾಗ ಸಭಿಕರಿಂದ ದೊಡ್ಡ ಕರತಾಡನ ವ್ಯಕ್ತವಾಯಿತು. ಪಾಕಿಸ್ತಾನದ ಆಡಳಿತದ ವಿರುದ್ಧ ಸ್ಥಳೀಯರು ಭಾರೀ ಪ್ರತಿಭಟನೆ ನಡೆಸುತ್ತಿರುವುದರಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆಯ ಮಧ್ಯೆ ಮೋಹನ್‌ ಭಾಗವತ್‌ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ: ಸಿಎಂ ಸಿದ್ದರಾಮಯ್ಯ

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಸಿಂಗಂ ಅಣ್ಣಾಮಲೈ ಗೆ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ!

SCROLL FOR NEXT