ಮೋಹನ್ ಭಾಗವತ್ 
ದೇಶ

ಪಿಒಕೆ ನಮ್ಮ ಮನೆ ಇದ್ದಂತೆ; ಕೋಣೆಗೆ ಅಪರಿಚಿತರು ನುಗ್ಗಿದ್ದಾರೆ, ನಾವು ಅದನ್ನು ಮರಳಿ ಪಡೆಯಬೇಕು: ಮೋಹನ್‌ ಭಾಗವತ್‌

ಇಡೀ ಭಾರತ ಒಂದೇ ಮನೆ, ಆದರೆ ಯಾರೋ ನಮ್ಮ ಮನೆಯ ಒಂದು ಕೋಣೆಯನ್ನು ಮನೆಯಿಂದ ಬೇರ್ಪಡಿಸಿದ್ದಾರೆ. ಅಲ್ಲಿ ನನ್ನ ಮೇಜು, ಕುರ್ಚಿ ಮತ್ತು ಬಟ್ಟೆಗಳನ್ನು ಇಡಲಾಗುತ್ತಿತ್ತು. ಅವರು (ಪಾಕ್) ಅದನ್ನು ಆಕ್ರಮಿಸಿಕೊಂಡಿದ್ದಾರೆ

ಭೂಪಾಲ್: ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತ ಎಂಬ ಮನೆಯೊಳಗಿನ ಕೋಣೆ ಇದ್ದಂತೆ, ಆದರೆ ಅಪರಿಚಿತರು ಒಳಗೆ ಬಂದಿದ್ದಾರೆ. ಆ ಕೊಠಡಿ ಮರುವಶ ಮಾಡಿಕೊಳ್ಳಬೇಕು' ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಭಾನುವಾರ ಕರೆ ನೀಡಿದ್ದಾರೆ.

ಮಧ್ಯ ಪ್ರದೇಶದ ಸತ್ನಾದಲ್ಲಿ ಸಿಂಧಿ ಜನಾಂಗದ ಸಭೆಯಲ್ಲಿ ಮಾತನಾಡಿದ ಅವರು, 'ಇಡೀ ಭಾರತ ಒಂದೇ ಮನೆ, ಆದರೆ ಯಾರೋ ನಮ್ಮ ಮನೆಯ ಒಂದು ಕೋಣೆಯನ್ನು ಮನೆಯಿಂದ ಬೇರ್ಪಡಿಸಿದ್ದಾರೆ. ಅಲ್ಲಿ ನನ್ನ ಮೇಜು, ಕುರ್ಚಿ ಮತ್ತು ಬಟ್ಟೆಗಳನ್ನು ಇಡಲಾಗುತ್ತಿತ್ತು. ಅವರು (ಪಾಕ್) ಅದನ್ನು ಆಕ್ರಮಿಸಿಕೊಂಡಿದ್ದಾರೆ. ನಾಳೆ, ನಾನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು' ಎಂದು ಕರತಾಡನದ ಮಧ್ಯೆ ಹೇಳಿದರು.

'ಸಭೆಯಲ್ಲಿ ಅನೇಕ ಸಿಂಧಿ ಸಹೋದರರು ಕುಳಿತಿದ್ದಾರೆ. ನನಗೆ ತುಂಬಾ ಸಂತಸವಾಗಿದೆ. ಅವರು ಪಾಕ್‌ ಗೆ ಹೋಗಲಿಲ್ಲ. ಅವಿಭಜಿತ ಭಾರತಕ್ಕೆ ಬಂದರು. ಪರಿಸ್ಥಿತಿ ವೈಪರಿತ್ಯದ ಕಾರಣ ಅವರು ಈ ಮನೆಗೆ ಆಗಮಿಸಿದರು. ಏಕೆಂದರೆ ಇದೂ ಅವರದ್ದೇ ಮನೆ' ಎಂದು ನುಡಿದರು.

ಈ ಮನೆ ಬೇರೆಯಲ್ಲದ ಕಾರಣ ಸಂದರ್ಭಗಳು ನಮ್ಮನ್ನು ಆ ಮನೆಯಿಂದ ಇಲ್ಲಿಗೆ ಕಳುಹಿಸಿವೆ," ಎಂದು ಅವರು ಹೇಳಿದಾಗ ಸಭಿಕರಿಂದ ದೊಡ್ಡ ಕರತಾಡನ ವ್ಯಕ್ತವಾಯಿತು. ಪಾಕಿಸ್ತಾನದ ಆಡಳಿತದ ವಿರುದ್ಧ ಸ್ಥಳೀಯರು ಭಾರೀ ಪ್ರತಿಭಟನೆ ನಡೆಸುತ್ತಿರುವುದರಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆಯ ಮಧ್ಯೆ ಮೋಹನ್‌ ಭಾಗವತ್‌ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

Frances New PM Resigns: ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್‌ನ ನೂತನ ಪ್ರಧಾನಿ ರಾಜೀನಾಮೆ! ಕಾರಣವೇನು?

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವವರು ಬ್ರಾಹ್ಮಣರು: ದೆಹಲಿ ಸಿಎಂ ರೇಖಾ ಗುಪ್ತಾ

ರಾಜ್ಯದಲ್ಲಿ coldrif ಸಿರಪ್ ಸರಬರಾಜು ಆಗಿಲ್ಲ: ಕೆಲವು ಕೆಮ್ಮಿನ ಔಷಧಿಗಳ ಮೇಲೆ ನಿಗಾ ಇಡಲು ಸೂಚನೆ; ದಿನೇಶ್ ಗುಂಡೂರಾವ್

SCROLL FOR NEXT