ಸಂಗ್ರಹ ಚಿತ್ರ 
ದೇಶ

ದೆಹಲಿಯಲ್ಲಿ ಎನ್‌ಕೌಂಟರ್‌: ವೈದ್ಯನ ಕೊಲೆ, ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನೇಪಾಳ ಪ್ರಜೆ ಸಾವು..!

ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ನೇಪಾಳದ ಲಾಲ್‌ಪುರ ಮೂಲದ ಭೀಮ್ ಮಹಾಬಹಾದ್ದೂರ್ ಜೋರಾ (39) ಎಂದು ಗುರ್ತಿಸಲಾಗಿದೆ. ಈತ ದೆಹಲಿ, ಗುರುಗ್ರಾಮ್, ಗುಜರಾತ್ ಮತ್ತು ಬೆಂಗಳೂರಿನಾದ್ಯಂತ ಹಲವಾರು ಕೊಲೆ, ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ.

ನವದೆಹಲಿ: ವೈದ್ಯನ ಕೊಲೆ, ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನೇಪಾಳ ಪ್ರಜೆ ಪೊಲೀಸರ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ.

ದೆಹಲಿ ಮತ್ತು ಗುರುಗ್ರಾಮ್ ಪೊಲೀಸರ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಆಗ್ನೇಯ ದೆಹಲಿಯ ಅಸ್ತಾ ಕುಂಜ್ ಪಾರ್ಕ್ ಬಳಿ ಎನ್ಕೌಂಟರ್ ನಡೆದಿದೆ.

ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ನೇಪಾಳದ ಲಾಲ್‌ಪುರ ಮೂಲದ ಭೀಮ್ ಮಹಾಬಹಾದ್ದೂರ್ ಜೋರಾ (39) ಎಂದು ಗುರ್ತಿಸಲಾಗಿದೆ. ಈತ ದೆಹಲಿ, ಗುರುಗ್ರಾಮ್, ಗುಜರಾತ್ ಮತ್ತು ಬೆಂಗಳೂರಿನಾದ್ಯಂತ ಹಲವಾರು ಕೊಲೆ, ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ.

ಮೇ 2024 ರಲ್ಲಿ ಜಂಗ್‌ಪುರ ಮೂಲದ ವೈದ್ಯ ಡಾ. ಯೋಗೇಶ್ ಚಂದರ್ ಪಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ಈತ ಬೇಕಾಗಿದ್ದ. ಈತನ ಕುರಿತು ಸುಳಿವು ನೀಡಿದವರಿಗೆ ಅಧಿಕಾರಿಗಳು 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದರು.

ಈ ನಡುವೆ ಸುಳಿವು ದೊರೆತ ಹಿನ್ನೆಲೆಯಲ್ಲಿ, ಗುರುಗ್ರಾಮ ಅಪರಾಧ ನಿಗ್ರಹ ದಳ ಮತ್ತು ದೆಹಲಿ ಪೊಲೀಸರ ವಿಶೇಷ ಪಡೆ ಬೆಳಗಿನ ಜಾವ 12:20 ರ ಸುಮಾರಿಗೆ ಆಸ್ತಾ ಕುಂಜ್ ಪಾರ್ಕ್ ಬಳಿ ಆರೋಪಿಯನ್ನು ತಡೆದಿದ್ದಾರೆ. ಆದರೆ, ಆರೋಪಿ ಪೊಲೀಸರ ಮೇಲೆ 6 ಸುತ್ತು ಗುಂಡುಗಳನ್ನು ಹಾರಿಸಿದ್ದು, ಅಧಿಕಾರಿಗಳು ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಗಾಯಗೊಂಡ ಆರೋಪಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT