ಸಂಗ್ರಹ ಚಿತ್ರ 
ದೇಶ

ದೆಹಲಿಯಲ್ಲಿ ಎನ್‌ಕೌಂಟರ್‌: ವೈದ್ಯನ ಕೊಲೆ, ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನೇಪಾಳ ಪ್ರಜೆ ಸಾವು..!

ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ನೇಪಾಳದ ಲಾಲ್‌ಪುರ ಮೂಲದ ಭೀಮ್ ಮಹಾಬಹಾದ್ದೂರ್ ಜೋರಾ (39) ಎಂದು ಗುರ್ತಿಸಲಾಗಿದೆ. ಈತ ದೆಹಲಿ, ಗುರುಗ್ರಾಮ್, ಗುಜರಾತ್ ಮತ್ತು ಬೆಂಗಳೂರಿನಾದ್ಯಂತ ಹಲವಾರು ಕೊಲೆ, ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ.

ನವದೆಹಲಿ: ವೈದ್ಯನ ಕೊಲೆ, ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನೇಪಾಳ ಪ್ರಜೆ ಪೊಲೀಸರ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ.

ದೆಹಲಿ ಮತ್ತು ಗುರುಗ್ರಾಮ್ ಪೊಲೀಸರ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಆಗ್ನೇಯ ದೆಹಲಿಯ ಅಸ್ತಾ ಕುಂಜ್ ಪಾರ್ಕ್ ಬಳಿ ಎನ್ಕೌಂಟರ್ ನಡೆದಿದೆ.

ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ನೇಪಾಳದ ಲಾಲ್‌ಪುರ ಮೂಲದ ಭೀಮ್ ಮಹಾಬಹಾದ್ದೂರ್ ಜೋರಾ (39) ಎಂದು ಗುರ್ತಿಸಲಾಗಿದೆ. ಈತ ದೆಹಲಿ, ಗುರುಗ್ರಾಮ್, ಗುಜರಾತ್ ಮತ್ತು ಬೆಂಗಳೂರಿನಾದ್ಯಂತ ಹಲವಾರು ಕೊಲೆ, ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ.

ಮೇ 2024 ರಲ್ಲಿ ಜಂಗ್‌ಪುರ ಮೂಲದ ವೈದ್ಯ ಡಾ. ಯೋಗೇಶ್ ಚಂದರ್ ಪಾಲ್ ಅವರ ಕೊಲೆಗೆ ಸಂಬಂಧಿಸಿದಂತೆ ಈತ ಬೇಕಾಗಿದ್ದ. ಈತನ ಕುರಿತು ಸುಳಿವು ನೀಡಿದವರಿಗೆ ಅಧಿಕಾರಿಗಳು 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದರು.

ಈ ನಡುವೆ ಸುಳಿವು ದೊರೆತ ಹಿನ್ನೆಲೆಯಲ್ಲಿ, ಗುರುಗ್ರಾಮ ಅಪರಾಧ ನಿಗ್ರಹ ದಳ ಮತ್ತು ದೆಹಲಿ ಪೊಲೀಸರ ವಿಶೇಷ ಪಡೆ ಬೆಳಗಿನ ಜಾವ 12:20 ರ ಸುಮಾರಿಗೆ ಆಸ್ತಾ ಕುಂಜ್ ಪಾರ್ಕ್ ಬಳಿ ಆರೋಪಿಯನ್ನು ತಡೆದಿದ್ದಾರೆ. ಆದರೆ, ಆರೋಪಿ ಪೊಲೀಸರ ಮೇಲೆ 6 ಸುತ್ತು ಗುಂಡುಗಳನ್ನು ಹಾರಿಸಿದ್ದು, ಅಧಿಕಾರಿಗಳು ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಗಾಯಗೊಂಡ ಆರೋಪಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

Mark ಚಿತ್ರದ 'ಸೈಕೋ ಸೈತಾನ್' ಚಿತ್ರದ ಹಾಡು ಸಖತ್ ಟ್ರೋಲ್; Darshan ಫ್ಯಾನ್ಸ್ ಟಾಂಗ್, Youtube ವಿಡಿಯೋ ಡಿಲೀಟ್!

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

ಮೂವರಿಗೆ ಒಲಿದ ಭೌತಶಾಸ್ತ್ರದ Nobel 2025

SCROLL FOR NEXT