ಮಹಿಳೆಯನ್ನು ಎಳೆದೊಯ್ದ ಮೊಸಳೆ 
ದೇಶ

ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!

ಒಡಿಶಾದ ಜಾಜ್ಪುರ ಜಿಲ್ಲೆಯ ಬಾರಿ ಬ್ಲಾಕ್‌ನ ಬೋಡುವಾ ಪಂಚಾಯತ್‌ನ ಕಾಂಟಿಯಾ ಗ್ರಾಮದ ಬಳಿ ಖರಸ್ರೋಟ ನದಿಗೆ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆಯೊಬ್ಬರನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ.

ಬಿಂಜಾರ್ಪುರ/ಬರಿ: ಒಡಿಶಾದ ಜಾಜ್ಪುರ ಜಿಲ್ಲೆಯ ಬಾರಿ ಬ್ಲಾಕ್‌ನ ಬೋಡುವಾ ಪಂಚಾಯತ್‌ನ ಕಾಂಟಿಯಾ ಗ್ರಾಮದ ಬಳಿ ಖರಸ್ರೋಟ ನದಿಗೆ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆಯೊಬ್ಬರನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ. ಮೃತಳನ್ನು ಕಾಂಟಿಯಾ ಗ್ರಾಮದ ಸುಕ್ದೇವ್ ಮಹಾಲಾ ಅವರ ಪತ್ನಿ 55 ವರ್ಷದ ಸೌದಾಮಿನಿ ಮಹಾಲಾ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ನದಿ ದಂಡೆಯಲ್ಲಿ ಅಡಗಿಕೊಂಡಿದ್ದ ಮೊಸಳೆ ಇದ್ದಕ್ಕಿದ್ದಂತೆ ಆಕೆಯ ಮೇಲೆ ಹಾರಿ ನೀರಿನೊಳಕ್ಕೆ ಎಳೆದೊಯ್ದಿದೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಗ್ರಾಮಸ್ಥರು ಧಾವಿಸಿದ್ದರು. ಅಷ್ಟರಲ್ಲಾಗಲೇ ಮೊಸಳೆ ಆಕೆಯನ್ನು ನದಿಯೊಳಗೆ ಎಳೆದೊಯ್ದಿತ್ತು. ಇದನ್ನು ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಹಿಳೆಯ ಮೃತದೇಹ ಪತ್ತೆಯಾಗಲಿಲ್ಲ. ಬಿಂಜಾರ್ಪುರ ಮತ್ತು ಬರಿ ಪ್ರದೇಶಗಳಲ್ಲಿ ನದಿಯ ಎರಡೂ ದಡಗಳಲ್ಲಿರುವ ನಿವಾಸಿಗಳು ಈಗ ಭಯದಿಂದ ಬದುಕುತ್ತಿದ್ದಾರೆ. ಕೇವಲ ಒಂದು ತಿಂಗಳ ಹಿಂದೆ ಮೊಸಳೆಯೊಂದು ಅದೇ ನದಿ ದಂಡೆಯಲ್ಲಿ ಹಸುವನ್ನು ಎಳೆದೊಯ್ದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

Mark ಚಿತ್ರದ 'ಸೈಕೋ ಸೈತಾನ್' ಚಿತ್ರದ ಹಾಡು ಸಖತ್ ಟ್ರೋಲ್; Darshan ಫ್ಯಾನ್ಸ್ ಟಾಂಗ್, Youtube ವಿಡಿಯೋ ಡಿಲೀಟ್!

SCROLL FOR NEXT