ಶಬರಿಮಲೆ ದೇವಸ್ಥಾನ 
ದೇಶ

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

ಪ್ರಸ್ತುತ ದೇವಸ್ವಂ ಉಪ ಆಯುಕ್ತರಾಗಿ(ಹರಿಪಾಡ್) ಕಾರ್ಯ ನಿರ್ವಹಿಸುತ್ತಿರುವ ಬಿ ಮುರಾರಿ ಬಾಬು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಟಿಡಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯು ಮಂಗಳವಾರ ಹಿರಿಯ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ.

ಪ್ರಸ್ತುತ ದೇವಸ್ವಂ ಉಪ ಆಯುಕ್ತರಾಗಿ(ಹರಿಪಾಡ್) ಕಾರ್ಯ ನಿರ್ವಹಿಸುತ್ತಿರುವ ಬಿ ಮುರಾರಿ ಬಾಬು ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಟಿಡಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

ದೇವಾಲಯದಲ್ಲಿ ಆಡಳಿತ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಾಬು, ಜುಲೈ 17, 2019 ರಂದು ಶಬರಿಮಲೆ ಕಾರ್ಯನಿರ್ವಾಹಕ ಅಧಿಕಾರಿಗೆ ವರದಿ ಸಲ್ಲಿಸುವ ಮೂಲಕ "ಗಂಭೀರ ಲೋಪ" ಎಸಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೇವಾಲಯದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಕಂಡುಬಂದಿರುವ ಚಿನ್ನ ಲೇಪಿತ ದ್ವಾರಪಾಲಕ ವಿಗ್ರಹಗಳನ್ನು ತಾಮ್ರ ಲೇಪಿತ ಎಂದು ವರದಿಯಲ್ಲಿ ತಪ್ಪಾಗಿ ಹೆಸರಿಸಿದ್ದಾರೆ.

ಆಲಪ್ಪುಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬು, ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ಟಿಡಿಬಿ ಇನ್ನೂ ತಮ್ಮಿಂದ ಯಾವುದೇ ವಿವರಣೆಯನ್ನು ಕೇಳಿಲ್ಲ ಎಂದು ಹೇಳಿದ್ದಾರೆ.

“ಗರ್ಭಗುಡಿಯ ಬಾಗಿಲಿನ ಎರಡೂ ಬದಿಯಲ್ಲಿರುವ ‘ದ್ವಾರಪಾಲಕ’ ವಿಗ್ರಹಗಳಿಗೆ ತೆಳುವಾದ ಚಿನ್ನದ ಲೇಪನವನ್ನು ಮಾತ್ರ ಹಾಕಲಾಗಿತ್ತು. 1998ರಲ್ಲಿ ಕೈಗಾರಿಕೋದ್ಯಮಿ ವಿಜಯ್ ಮಲ್ಯ ಅವರ ಪ್ರಾಯೋಜಕತ್ವದಲ್ಲಿ ಗರ್ಭಗುಡಿಗೆ ಚಿನ್ನ ಲೇಪಿಸಲಾಗಿತ್ತು. ಅದು ಸವೆದುಹೋಗಿ ಬರೀ ತಾಮ್ರದ ತಟ್ಟೆ ಮಾತ್ರ ಉಳಿದಿತ್ತು. ಮೂಲ ಲೋಹ ತಾಮ್ರವಾಗಿರುವ ಕಾರಣದಿಂದಾಗಿ ತಾಮ್ರವೆಂದೇ ಉಲ್ಲೇಖಿಸಲಾಗಿದೆ” ಎಂದು ಬಾಬು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT