ಮೈಥಿಲಿ ಠಾಕೂರ್ 
ದೇಶ

Bihar election: ಮೈಥಿಲಿ ಠಾಕೂರ್ ಕಣಕ್ಕೆ? ಬಿಜೆಪಿ ನಾಯಕರ ಭೇಟಿ ಬಳಿಕ ಹೇಳಿದ್ದೇನು?

ಇತ್ತೀಚಿಗೆ ಮೈಥಿಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರ ಸಂಘಟನಾ ಉಸ್ತುವಾರಿ ವಿನೋದ್ ತಾವ್ದೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರನ್ನು ಭೇಟಿಯಾಗಿದ್ದರು.

ಜಬಲ್ಪರ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿರುವಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಅದರಲ್ಲೂ ತನ್ನ ವಿಶಿಷ್ಟ ಕಂಠದ ಮೂಲಕ ದೇಶಾದ್ಯಂತ ಗುರುತಿಸಿಕೊಂಡಿರುವ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಇತ್ತೀಚಿಗೆ ಮೈಥಿಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಹಾರ ಸಂಘಟನಾ ಉಸ್ತುವಾರಿ ವಿನೋದ್ ತಾವ್ದೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರನ್ನು ಭೇಟಿಯಾಗಿದ್ದರು.

25 ವರ್ಷದ ಮೈಥಿಲಿ ಠಾಕೂರ್ ಹಲವು ಸಂಗೀತ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. 2024ರಲ್ಲಿ ಪ್ರಧಾನ ನರೇಂದ್ರ ಮೋದಿ ಅವರಿಂದ ನ್ಯಾಷನಲ್ ಕ್ರಿಯೆಟರ್ ಪ್ರಶಸ್ತಿ ಪಡೆದುಕೊಂಡಿದ್ದರು.

ಈ ಕುರಿತು ಸುದ್ದಿಸಂಸ್ಥೆ ಪಿಟಿಐ ಜೊತೆಗೆ ಮಾತನಾಡಿದ ಮೈಥಿಲಿ ಠಾಕೂರ್ ತಮ್ಮ ಹುಟ್ಟೂರು ಮಧುಬನಿ ಜಿಲ್ಲೆಯ ಬೇಣಿಪಟ್ಟಿಯಿಂದ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT