ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ 
ದೇಶ

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ; Video

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಸಿಲಿಗುರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಸಂಸದ ಖಗೆನ್ ಮುರ್ಮು ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಸಿಲಿಗುರಿ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರ ನಿಯೋಗದ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು, ಘಟನೆಯಲ್ಲಿ ಬಿಜೆಪಿ ಸಂಸದ ಖಗೆನ್ ಮುರ್ಮು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಸಿಲಿಗುರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಸಂಸದ ಖಗೆನ್ ಮುರ್ಮು ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಖಗೆನ್ ಅವರು ರಾಜ್ಯದ ಉತ್ತರ ಭಾಗದಲ್ಲಿ ಪ್ರವಾಹ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾಗ ನಾಗರ್ಕಟದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ಪ್ರವಾಹ ಪೀಡಿತ ಉತ್ತರ ಬಂಗಾಳದಲ್ಲಿ ಇಬ್ಬರು ಬಿಜೆಪಿ ನಾಯಕರಾದ ಮುರ್ಮು ಮತ್ತು ಶಾಸಕ ಶಂಕರ್ ಘೋಷ್ ಅವರ ಮೇಲೆ ನಡೆದ ಒಂದು ದಿನದ ನಂತರ ಮಮತಾ ಅವರು ಆಸ್ಪತ್ರೆ ಭೇಟಿ ನೀಡಿದ್ದಾರೆ.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ಮಮತಾ, ಗಾಯಗೊಂಡ ಸಂಸದ, ಅವರ ಪತ್ನಿ ಮತ್ತು ಮಗನೊಂದಿಗೆ ಕೆಲವು ನಿಮಿಷಗಳ ಕಾಲ ಮಾತನಾಡಿದರು. ನಂತರ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವನ್ನು ಸಂಪರ್ಕಿಸಿದರು.

ಮೂಲಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರು, ಬಿಜೆಪಿ ಸಂಸದರಿಗೆ ಆಗಿರುವ ಗಾಯಗಳ ಬಗ್ಗೆ ಮತ್ತು ಅವರಿಗೆ ನೀಡುತ್ತಿರುವ ಕಿಚಿತ್ಸೆ ಸೇರಿದಂತೆ ಸಂಸದರ ಸ್ಥಿತಿಯ ಬಗ್ಗೆ ವಿವರವಾಗಿ ವಿಚಾರಿಸಿದರು. "ನಿಮಗೆ ಮಧುಮೇಹವಿದೆಯೇ? ನೀವು ನಿಯಮಿತವಾಗಿ ಇನ್ಸುಲಿನ್ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೀರಾ?" ಎಂದು ದೀದಿ ಮೃದುವಾದ ಧ್ವನಿಯಲ್ಲಿ ಬಿಜೆಪಿ ಸಂಸದರ ಆರೋಗ್ಯ ವಿಚಾರಿಸಿದರು.

ಹೊರಡುವ ಮೊದಲು, ಮುಖ್ಯಮಂತ್ರಿಗಳು ವೈದ್ಯಕೀಯ ಸಲಹೆಯನ್ನು ಎಚ್ಚರಿಕೆಯಿಂದ ಪಾಲಿಸುವಂತೆ ವಿನಂತಿಸಿದರು ಮತ್ತು ಸರ್ಕಾರ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಅವರ ಕುಟುಂಬಕ್ಕೆ ತಿಳಿಸಿದರು. "ನಿಮಗೆ ಬೇರೆಡೆ ಯಾವುದೇ ಸಹಾಯ ಅಥವಾ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ, ದಯವಿಟ್ಟು ನನಗೆ ತಿಳಿಸಿ" ಎಂದು ಬ್ಯಾನರ್ಜಿ ಹೇಳಿದರು ಎಂದು ವರದಿಯಾಗಿದೆ.

ಆದಾಗ್ಯೂ, ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಬಿಜೆಪಿ ಶಾಸಕ ಶಂಕರ್ ಘೋಷ್ ಅವರನ್ನು ಬ್ಯಾನರ್ಜಿ ಭೇಟಿಯಾಗಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

G20 Summit: ಭಯೋತ್ಪಾದನೆ, ಮಾದಕ ದ್ರವ್ಯ ಸಾಗಾಟ ತಡೆಗೆ ಜಾಗತಿಕ ಕ್ರಮ; ನಾಲ್ಕು ಉಪ ಕ್ರಮ ಪ್ರಸ್ತಾಪಿಸಿದ ಪ್ರಧಾನಿ ಮೋದಿ!

"ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ": ಸಿಎಂ ಎದುರೇ DK Shivakumar ಮಾರ್ಮಿಕ ಮಾತು!

Ashes: ಎರಡೇ ದಿನಕ್ಕೇ Australia vs England ಮೊದಲ ಟೆಸ್ಟ್ ಮುಕ್ತಾಯ; 104 ವರ್ಷಗಳ ಬಳಿಕ ಅತ್ಯಪರೂಪದ ದಾಖಲೆ!

ನೀವು ಮತ ನೀಡದಿದ್ದರೆ ನಾನು ನಿಮ್ಮ ನಗರಕ್ಕೆ ಹಣ ನೀಡುವುದಿಲ್ಲ: ಅಜಿತ್ ಪವಾರ್ ಬಹಿರಂಗ ಬೆದರಿಕೆ

SCROLL FOR NEXT