ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ ಘಟಕ  
ದೇಶ

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ: ನಾಲ್ವರು ಸಾವು, ಆರು ಮಂದಿಗೆ ಗಾಯ

ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಸರ್ವಿಸ್ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ.

ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಮ್ಮ ಶಿಫ್ಟ್ ಮುಗಿಸಿ 10 ಕಾರ್ಮಿಕರು ಲಿಫ್ಟ್ ನಲ್ಲಿ ಇಳಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಎಂದು ಅಂಕಿತಾ ಶರ್ಮಾ ತಿಳಿಸಿದ್ದಾರೆ. ಅಲ್ಲಿದ್ದವರೆಲ್ಲ ಗಾಯಗೊಂಡಿದ್ದು, ಅವರನ್ನು ಹತ್ತಿರದ ರಾಯ್‌ಗಢದ ಜಿಂದಾಲ್ ಫೋರ್ಟಿಸ್ ಆಸ್ಪತ್ರೆಗೆ ಸಾಗಿಸಲಾಯಿತು. ನಾಲ್ವರು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ.

ಉಳಿದ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ. 2,000 ಕೆಜಿ ಲೋಡ್ ಸಾಮರ್ಥ್ಯದ ಲಿಫ್ಟ್, ಕೆಲವೇ ದಿನಗಳ ಹಿಂದೆ, ಸೆಪ್ಟೆಂಬರ್ 29 ರಂದು ನಿರ್ವಹಣೆಗೆ ಒಳಗಾಗಿತ್ತು ಎಂದು ತಿಳಿದುಬಂದಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT