ರಾಜೇನ್ ಗೋಹೈನ್ 
ದೇಶ

ಅಸ್ಸಾಂನ ಸ್ಥಳೀಯ ಸಮುದಾಯಗಳಿಗೆ ದ್ರೋಹ: ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ರಾಜೇನ್

ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ".

ದಿಬ್ರುಗಢ: ಮಾಜಿ ಕೇಂದ್ರ ಸಚಿವ ಮತ್ತು ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ರಾಜೇನ್ ಗೋಹೈನ್ ಅವರು ಗುರುವಾರ ಇತರ 17 ಸದಸ್ಯರೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೇನ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಕೇಳಿಕೊಂಡಿದ್ದಾರೆ.

ರಾಜೇನ್ ಅವರೊಂದಿಗೆ ಅಸ್ಸಾಂನ ಹದಿನೇಳು ಇತರ ಬಿಜೆಪಿ ಸದಸ್ಯರು ಸಹ ದಿಲೀಪ್ ಸೈಕಿಯಾ ಅವರಿಗೆ ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಟಿಐ ಜೊತೆ ಮಾತನಾಡಿದ ರಾಜೇನ್ ಗೊಹೈನ್, ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ" ಎಂದು ಆರೋಪಿಸಿದ್ದಾರೆ.

ರಾಜೇವ್ ಅವರು 1999 ರಿಂದ 2019 ರವರೆಗೆ ನಾಲ್ಕು ಅವಧಿಗೆ ನಾಗಾಂವ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು 2016 ರಿಂದ 2019 ರವರೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT