ರಾಜೇನ್ ಗೋಹೈನ್ 
ದೇಶ

ಅಸ್ಸಾಂನ ಸ್ಥಳೀಯ ಸಮುದಾಯಗಳಿಗೆ ದ್ರೋಹ: ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ರಾಜೇನ್

ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ".

ದಿಬ್ರುಗಢ: ಮಾಜಿ ಕೇಂದ್ರ ಸಚಿವ ಮತ್ತು ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ರಾಜೇನ್ ಗೋಹೈನ್ ಅವರು ಗುರುವಾರ ಇತರ 17 ಸದಸ್ಯರೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೇನ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಕೇಳಿಕೊಂಡಿದ್ದಾರೆ.

ರಾಜೇನ್ ಅವರೊಂದಿಗೆ ಅಸ್ಸಾಂನ ಹದಿನೇಳು ಇತರ ಬಿಜೆಪಿ ಸದಸ್ಯರು ಸಹ ದಿಲೀಪ್ ಸೈಕಿಯಾ ಅವರಿಗೆ ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಟಿಐ ಜೊತೆ ಮಾತನಾಡಿದ ರಾಜೇನ್ ಗೊಹೈನ್, ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ" ಎಂದು ಆರೋಪಿಸಿದ್ದಾರೆ.

ರಾಜೇವ್ ಅವರು 1999 ರಿಂದ 2019 ರವರೆಗೆ ನಾಲ್ಕು ಅವಧಿಗೆ ನಾಗಾಂವ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು 2016 ರಿಂದ 2019 ರವರೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video