ಅಯೋಧ್ಯೆ ರಾಮ ಮಂದಿರ  
ದೇಶ

ನವೆಂಬರ್ 25 ರಂದು ಪ್ರಧಾನಿ ಮೋದಿಯಿಂದ ರಾಮ ಮಂದಿರದ ಮೇಲೆ 21 ಅಡಿ ಎತ್ತರದ ಧರ್ಮ ಧ್ವಜಾರೋಹಣ

ಈ ಕಾರ್ಯಕ್ರಮವು ದೇವಾಲಯದ ನಿರ್ಮಾಣವನ್ನು ಅಧಿಕೃತವಾಗಿ ಪೂರ್ಣಗೊಳಿಸಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಅಯೋಧ್ಯೆಯ ರಾಮ ಮಂದಿರದ ಶಿಖರದ ಮೇಲೆ 21 ಅಡಿ ಎತ್ತರದ ಧಾರ್ಮಿಕ(ಧರ್ಮ) ಧ್ವಜವನ್ನು ಹಾರಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಈ ಕಾರ್ಯಕ್ರಮವು ದೇವಾಲಯದ ನಿರ್ಮಾಣವನ್ನು ಅಧಿಕೃತವಾಗಿ ಪೂರ್ಣಗೊಳಿಸಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ ಅವರು, ನವೆಂಬರ್ 25 ರಂದು ಪ್ರಧಾನಿ ಮೋದಿ ಅವರ ಆಗಮನವನ್ನು ದೃಢಪಡಿಸಿದರು ಮತ್ತು ಈ ಸಮಾರಂಭ "ಐತಿಹಾಸಿಕ"ವಾಗಿರುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಧರ್ಮ ಧ್ವಜಾರೋಹಣದ ಮೂಲಕ, ನಂಬಿಕೆ ಮತ್ತು ಕಾಯುವಿಕೆಯ ಬಹುದಿನಗಳ ಕನಸು ಈಗ ನನಸಾಗಿದೆ ಎಂದು ಜಗತ್ತಿಗೆ ತಿಳಿಸುತ್ತಾರೆ ಎಂದರು.

ಮುಖ್ಯ ದೇವಾಲಯ ನಿರ್ಮಾಣವು "ಬಹುತೇಕ ಪೂರ್ಣಗೊಂಡಿದೆ. ಹೊರಗೋಡೆಯ ನಿರ್ಮಾಣವೂ ಅಂತಿಮ ಹಂತದಲ್ಲಿದ್ದು, ಶೇಷಾವತಾರ ದೇವಸ್ಥಾನ, ಸಪ್ತ ಮಂಟಪ ಮತ್ತು ಪುಷ್ಕರಣಿ(ಪವಿತ್ರ ಕೊಳ) ಕಾಮಗಾರಿ ಪೂರ್ಣಗೊಂಡಿದೆ ಎಂದರು.

ದೇವಾಲಯದ ಪಕ್ಕದಲ್ಲಿ ಭಕ್ತರಿಗಾಗಿ ಶೂ ರ್ಯಾಕ್ ಸೌಲಭ್ಯವನ್ನು ನಿರ್ಮಿಸಲಾಗುತ್ತಿದ್ದು, ಇದು ಪೂರ್ಣಗೊಳ್ಳುವ ಹಂತದಲ್ಲಿದ್ದು, ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ Shimron Hetmyer ಸಿಡಿಲಬ್ಬರದ ಬ್ಯಾಟಿಂಗ್, 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಉಡೀಸ್!

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

SCROLL FOR NEXT