ಸಿಜೆಐ ಬಿಆರ್ ಗವಾಯಿ ಸಾಂದರ್ಭಿಕ ಚಿತ್ರ 
ದೇಶ

ಶೂ ಎಸೆತ ಪ್ರಕರಣ: ಅದೊಂದು 'ಮರೆತ ಅಧ್ಯಾಯ'; CJI ಬಿ.ಆರ್ ಗವಾಯಿ ಅಚ್ಚರಿಯ ಹೇಳಿಕೆಗೆ ಕಾರಣವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಕೃತ್ಯವನ್ನು ಕ್ಷಮಿಸಲಾಗದು ಎಂದು ಹೇಳಿದರು. ಇದು ತಪ್ಪು ಮಾಹಿತಿಯ ಫಲಿತಾಂಶ ಮತ್ತು ಅಗ್ಗದ ಪ್ರಚಾರದ ಪ್ರಯತ್ನ ಎಂದು ಕರೆದರು.

ನವದೆಹಲಿ: ಭಾರತದ ಅತ್ಯುನ್ನತ ಸ್ಥಾನವಾದ ಮುಖ್ಯ ನ್ಯಾಯಮೂರ್ತಿಯತ್ತ ಶೂ ಎಸೆತ ಪ್ರಕರಣ ದೇಶಾದ್ಯಂತ ತೀವ್ರ ಹಾಗೂ ಖಂಡನೆಗೆ ಗುರಿಯಾಗಿರುವಂತೆಯೇ 'ಅದೊಂದು ಮರೆತ ಅಧ್ಯಾಯ' ಎಂದು CJI ಬಿಆರ್ ಗವಾಯಿ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅಕ್ಟೋಬರ್ 6 ರಂದು ವಕೀಲರೊಬ್ಬರು ಶೂ ಎಸೆಯಲು ಪ್ರಯತ್ನಿಸಿದಾಗ ನಾನು ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಆಘಾತಕ್ಕೊಳಗಾಗಿದ್ದೇವು. ಆದರೆ 'ಇದೊಂದು ಮರೆತ ಅಧ್ಯಾಯ' ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ವಿಚಾರ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಾತನಾಡಿದ ಬಿಆರ್ ಗವಾಯಿ, ಸೋಮವಾರ ನಡೆದ ಘಟನೆಯಿಂದ ನನ್ನ ಸಹೋದರ ಸಹೋದ್ಯೋಗಿ ತುಂಬಾ ಆಘಾತಕ್ಕೊಳಗಾಗಿದ್ದೇವೆ. ಆದರೆ ನಮ್ಮ ಪಾಲಿಗೆ ಇದು ಮರೆತು ಹೋದ ಅಧ್ಯಾಯ ಎಂದು ಹೇಳಿದರು. ಈ ವೇಳೆ ಸಿಜೆಐ ಅವರ ಪಕ್ಕದಲ್ಲಿದ್ದ ಕುಳಿತಿದ್ದ ನ್ಯಾ, ಉಜ್ವಲ್‌ ಭುಯಾನ್‌, ತಪ್ಪಿತಸ್ಥ ವಕೀಲರ ವಿರುದ್ಧದ ಕ್ರಮಕ್ಕೆ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದರು.

ನನಗೆ ಈ ಬಗ್ಗೆ ನನ್ನದೇ ಆದ ಅಭಿಪ್ರಾಯವಿದೆ. ಅವರು ಸಿಜೆಐ, ಇದು ತಮಾಷೆಯ ವಿಷಯವಲ್ಲ! ಈ ದಾಳಿಯು "ಸುಪ್ರೀಂ ಕೋರ್ಟ್‌ಗೆ ಮಾಡಿದ ಅವಮಾನ" ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಕೃತ್ಯವನ್ನು ಕ್ಷಮಿಸಲಾಗದು ಎಂದು ಹೇಳಿದರು. ಇದು ತಪ್ಪು ಮಾಹಿತಿಯ ಫಲಿತಾಂಶ ಮತ್ತು ಅಗ್ಗದ ಪ್ರಚಾರದ ಪ್ರಯತ್ನ ಎಂದು ಕರೆದರು. ಅಲ್ಲದೇ CJI ಅವರ ಉದಾತ್ತತೆ ಮತ್ತು "ಗಾಂಭೀರ್ಯ" ವನ್ನು ಶ್ಲಾಘಿಸಿದರು. ಕೋರ್ಟ್‌ನಲ್ಲಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಆಘಾತಕಾರಿ ಘಟನೆಯ ಬಗ್ಗೆ ಇನ್ನು ಮುಂದೆ ಚರ್ಚಿಸಬೇಡಿ ಎಂದು ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರನ್ನು ಕೇಳಿಕೊಂಡರು.

ನಮಗೆ ಇದು ಮರೆತುಹೋದ ಅಧ್ಯಾಯವಾಗಿದೆ, ”ಎಂದು ಸಿಜೆಐ ಪುನರುಚ್ಚರಿಸಿದರು ಮತ್ತು ವಿಚಾರಣೆಯನ್ನು ಮುಂದುವರೆಸಿದರು. ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಇಡೀ ಘಟನೆಯನ್ನು ಒಟ್ಟಾರೆ ಸಾಂಸ್ಥಿಕ ಸಂಸ್ಥೆಯ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ. ನಾನು ಘಟನೆಗೆ ಪ್ರತ್ಯಕ್ಷದರ್ಶಿ ಅಲ್ಲ. ಪತ್ರಿಕಾ ವರದಿಗಳಿಂದ ಇದು ನನಗೆ ತಿಳಿಯಿತು. ಇದು ತನಿಖೆಗೆ ಅರ್ಹವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತಕ್ಕೆ UNSC ಸದಸ್ಯತ್ವಕ್ಕೆ ಬ್ರಿಟನ್ ಪ್ರಧಾನಿ Starmer ಬೆಂಬಲ; 2030 ರ ವೇಳೆಗೆ ಬ್ರಿಟನ್ ಜೊತೆಗಿನ ವ್ಯಾಪಾರ ದ್ವಿಗುಣ- Modi

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

'ನನ್ನ ಸ್ನೇಹಿತನೊಂದಿಗೆ ಮಾತನಾಡಿದೆ': ಟ್ರಂಪ್‌ಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದೇಕೆ?

ಭಾರತವೇ ನಮಗೆ ಮಾದರಿ, ಅಕ್ರಮ ವಲಸೆ ತಡೆಗೂ ಸಹಕಾರಿ; ಬ್ರಿಟನ್ ನಲ್ಲೂ ಆಧಾರ್ ಜಾರಿಗೆ PM Keir Starmer ಉತ್ಸುಕ; Nandan Nilekani ಜೊತೆ ಸಭೆ!

Ranthambore: 'ಇದು ನನ್ನದು, ಇಲ್ಲ ನನ್ನದು'; ದಟ್ಟ ಅರಣ್ಯದಲ್ಲಿ ಅಮ್ಮ-ಮಗಳ ಬಿಗ್ ಫೈಟ್! ದಂಗಾದ ಪ್ರವಾಸಿಗರು, ಅಪರೂಪದ Video

SCROLL FOR NEXT