ಸಂತೋಷ್ ಕುಶ್ವಾಹ 
ದೇಶ

Bihar polls: ಮಾಜಿ ಸಂಸದ ಸಂತೋಷ್ ಕುಶ್ವಾಹ ಸೇರಿದಂತೆ ಹಲವು ನಾಯಕರು RJD ಸೇರಲು ಸಜ್ಜು; ನಿತೀಶ್ ಗೆ ಭಾರಿ ಹೊಡೆತ!

ಇಂದು ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಆರ್ ಜೆಡಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಇವರೆಲ್ಲರೂ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಪುರ್ನಿಯಾ ಕ್ಷೇತ್ರದ ಮಾಜಿ ಸಂಸದ ಸಂತೋಷ್ ಕುಶ್ವಾಹ ಆರ್ ಜೆಡಿ (RJD) ಸೇರಲು ಸಜ್ಜಾಗಿದ್ದು, ಸಿಎಂ ನಿತೀಶ್ ಕುಮಾರ್ ಅವರ ಜೆಡಿಯುಗೆ ಭಾರಿ ಹೊಡೆತ ಎನ್ನಲಾಗುತ್ತಿದೆ.

ಕುಶ್ವಾಹ ಪುರ್ನಿಯಾ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಬಾಂಕಾ ಕ್ಷೇತ್ರದ ಹಾಲಿ ಜೆಡಿಯು ಸಂಸದ ಗಿರ್ಧಾರಿ ಚಾಣಕ್ಯ ಅವರ ಪುತ್ರ ಪ್ರಕಾಶ್ ರಂಜನ್ ಹಾಗೂ ಜಹಾನಬಾದ್ ಮಾಡಿ ಸಂಸದ ಜಗದೀಶ್ ಶರ್ಮಾ ಅವರ ಪುತ್ರ ರಾಹುಲ್ ಶರ್ಮಾ ಕೂಡಾ ಆರ್ ಜೆಡಿ ಸೇರುತ್ತಿದ್ದಾರೆ.

ಇಂದು ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಆರ್ ಜೆಡಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಇವರೆಲ್ಲರೂ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅನುಭವಿ ನಾಯಕರು ಮತ್ತು ಸ್ಥಳೀಯ ಮಟ್ಟದಲ್ಲಿ ಪ್ರಭಾವ ಹೊಂದಿರುವವರನ್ನು ಪಕ್ಷ ಸೇರ್ಪಡೆ ಮೂಲಕ ತನ್ನ ಕಾರ್ಯಕರ್ತರನ್ನು ಬಲಪಡಿಸಲು RJD ಕಾರ್ಯತಂತ್ರ ರೂಪಿಸಿದೆ.

ಜೆಡಿಯು ಮುಂಬರುವ ಚುನಾವಣೆಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸುವ ಜವಾಬ್ದಾರಿಯನ್ನು ಬಿಜೆಪಿಗೆ ವಹಿಸಿದೆ. ಇತರ ಮಿತ್ರಪಕ್ಷಗಳಾದ ಚಿರಾಗ್ ಪಾಸ್ವಾನ್, ಜಿತನ್ ರಾಮ್ ಮಾಂಝಿ ಮತ್ತು ಉಪೇಂದ್ರ ಕುಶ್ವಾಹ ಅವರೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ಪಕ್ಷಕ್ಕೆ ವಹಿಸಲಾಗಿದೆ ಮತ್ತು ಚರ್ಚೆಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ಹೇಳಲಾಗಿದೆ. NDA ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಕ್ಟೋಬರ್ 13 ರಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT