ಮಿಶ್ರಿ ಲಾಲ್ ಯಾದವ್, ಮೈಥಿಲಿ ಠಾಕೂರ್ 
ದೇಶ

ಬಿಹಾರ ಚುನಾವಣೆ: ಮೈಥಿಲಿ ಠಾಕೂರ್ ಗೆ ಟಿಕೆಟ್; ಬಿಜೆಪಿಗೆ ಶಾಸಕ ಮಿಶ್ರಿ ಲಾಲ್ ಯಾದವ್ ರಾಜಿನಾಮೆ!

ಪತ್ರಿಕಾಗೋಷ್ಠಿಯಲ್ಲಿ, ಅಲಿನಗರದ ನಿರ್ಗಮಿತ ಶಾಸಕ ಮಿಶ್ರಿ ಲಾಲ್ ಯಾದವ್ ಅವರು ದಲಿತರ ಜೊತೆಗೆ ತಮ್ಮನ್ನು ಅವಮಾನಿಸಲಾಗುತ್ತಿದೆ ಎಂದು ಆರೋಪಿಸಿದರು.

ಪಾಟ್ನಾ: ಬಿಹಾರದ ದರ್ಭಂಗಾ ಜಿಲ್ಲೆಯ ಅಲಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಿಶ್ರಿ ಲಾಲ್ ಯಾದವ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ವಿಐಪಿ ಪಕ್ಷದಿಂದ ಗೆದ್ದ ನಂತರ ಯಾದವ್ ಬಿಜೆಪಿಗೆ ಸೇರಿದರು. ಬಿಹಾರದ ಪ್ರಸಿದ್ಧ ಜಾನಪದ ಗಾಯಕಿ ಮೈಥಿಲಿ ಠಾಕೂರ್ ಅಲಿನಗರದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳ ಕಾರಣ ಮಿಶ್ರಿಲಾಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ, ಅಲಿನಗರದ ನಿರ್ಗಮಿತ ಶಾಸಕ ಮಿಶ್ರಿ ಲಾಲ್ ಯಾದವ್ ಅವರು ದಲಿತರ ಜೊತೆಗೆ ತಮ್ಮನ್ನು ಅವಮಾನಿಸಲಾಗುತ್ತಿದೆ ಎಂದು ಆರೋಪಿಸಿದರು. ಶಾಸಕರಾಗಿ ತಮ್ಮ ಸ್ವಾಭಿಮಾನಕ್ಕೆ ನೋವುಂಟು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಬಿಜೆಪಿ ತೊರೆದ ಯಾದವ್, ಪಕ್ಷದೊಳಗೆ ತಮ್ಮ ಸ್ವಾಭಿಮಾನವನ್ನು ಕಾಪಾಡಿಕೊಳ್ಳುವುದು ಕಷ್ಟಕರವಾಗಿದೆ ಎಂದು ಹೇಳಿದರು. ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸುವುದಾಗಿ ಹೇಳಿದರು. ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ಎಂದು ಆರೋಪಿಸಿದ ಮಿಶ್ರಿ ಲಾಲ್ ಯಾದವ್, ಎನ್‌ಡಿಎ ಎರಡು ವಿಧಾನಸಭಾ ಸ್ಥಾನಗಳನ್ನು ಗೆದ್ದಿದ್ದು ತಮ್ಮಿಂದಲೇ ಎಂದು ಹೇಳಿದರು.

ಮಿಶ್ರಿ ಲಾಲ್ ಯಾದವ್ ಬಹಳ ದಿನಗಳಿಂದ ಬಿಜೆಪಿಯ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂಬ ವದಂತಿ ಇದೆ. ಮೈಥಿಲಿ ಠಾಕೂರ್ ಅವರಿಗೆ ಅಲಿನಗರ ಸ್ಥಾನದಿಂದ ಟಿಕೆಟ್ ನೀಡಲಾಗುವುದು ಎಂಬ ಊಹಾಪೋಹದ ನಂತರ ಅವರು ಆರಂಭದಲ್ಲಿ ಮೌನವಾಗಿದ್ದು ಈಗ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಿಶ್ರಿ ಲಾಲ್ ಯಾದವ್ ಈಗ ಆರ್‌ಜೆಡಿ ಸೇರಬಹುದು ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಪತ್ರಿಕಾಗೋಷ್ಠಿಯಲ್ಲಿ ಅವರು ಈ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಈ ಸುದ್ದಿ ಬರೆಯುವ ಹೊತ್ತಿಗೆ, ಮಿಶ್ರಿ ಲಾಲ್ ಯಾದವ್ ಅವರ ರಾಜೀನಾಮೆಯ ಬಗ್ಗೆ ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಗಾಯಕಿ ಮೈಥಿಲಿ ಠಾಕೂರ್ ಮತ್ತು ಅವರ ತಂದೆ ಇತ್ತೀಚೆಗೆ ಕೇಂದ್ರ ಸಚಿವ ನಿತ್ಯಾನಂದ ರೈ ಮತ್ತು ಹಿರಿಯ ಬಿಜೆಪಿ ನಾಯಕ ವಿನೋದ್ ತಾವ್ಡೆ ಅವರನ್ನು ಭೇಟಿಯಾದರು. ಟಿಕೆಟ್ ಸಿಕ್ಕರೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮೈಥಿಲಿ ಹೇಳಿದ್ದರು. ಬಿಹಾರ ಮತ್ತು ಮಿಥಿಲಾದ ಅಭಿವೃದ್ಧಿಗಾಗಿ ಕೆಲಸ ಮಾಡುವ ಬದ್ಧತೆಯನ್ನು ಅವರು ವ್ಯಕ್ತಪಡಿಸಿದ್ದರು. ಏತನ್ಮಧ್ಯೆ, ಆರ್‌ಜೆಡಿಯ ಕಾಡುರಾಜ್‌ನಿಂದಾಗಿ ತಾನು ಬಿಹಾರವನ್ನು ತೊರೆದು ದೆಹಲಿಯಲ್ಲಿ ನೆಲೆಸಿದ್ದೇನೆ ಎಂದು ಮೈಥಿಲಿಯ ತಂದೆ ಕೂಡ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT