ಶ್ರೀಕಾಂತ್ ಅಯ್ಯಂಗಾರ್  
ದೇಶ

ಮಹಾತ್ಮ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ: ವಿಡಿಯೋ ವೈರಲ್, ಆಕ್ರೋಶಕ್ಕೆ ಗುರಿಯಾದ ತೆಲುಗು ನಟ!

ಗಾಂಧಿ ಕುರಿತು ಶ್ರೀಕಾಂತ್ ಅಯ್ಯಂಗಾರ್ ಅವರ ಹೇಳಿಕೆಯು ಆನ್ ಲೈನ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ರಾಜಕೀಯ ನಾಯಕರು, ವಿವಿಧ ಸಂಘಟನೆಗಳು ಮತ್ತು ಗಾಂಧಿ ಅನುಯಾಯಿಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಟಾಲಿವುಡ್ ನಟ ಶ್ರೀಕಾಂತ್ ಅಯ್ಯಂಗಾರ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆದ ನಂತರ ವಿವಾದಕ್ಕೆ ಗುರಿಯಾಗಿದ್ದಾರೆ. ವೈರಲ್ ಆಗಿರುವ ಕ್ಲಿಪ್ ನಲ್ಲಿ ಗಾಂಧಿಯನ್ನು ರಾಷ್ಟ್ರಪಿತ ಎಂದು ಕರೆಯುವುದು ಎಲ್ಲರಿಗೂ ಮಾಡುವ ಅವಮಾನ ಎಂದಿದ್ದಾರೆ.

ಗಾಂಧಿ ಕುರಿತು ಶ್ರೀಕಾಂತ್ ಅಯ್ಯಂಗಾರ್ ಅವರ ಹೇಳಿಕೆಯು ಆನ್ ಲೈನ್ ನಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ರಾಜಕೀಯ ನಾಯಕರು, ವಿವಿಧ ಸಂಘಟನೆಗಳು ಮತ್ತು ಗಾಂಧಿ ಅನುಯಾಯಿಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಶ್ರೀಕಾಂತ್ ಅವರು ನಾಥುರಾಮ್ ಗೋಡ್ಸೆ ಅವರನ್ನು ಹೊಗಳಿದ್ದಾರೆ. ಇದಕ್ಕೆ ಅನೇಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಗಳು ರಾಷ್ಟ್ರೀಯ ನಾಯಕನ ಮಾನಹಾನಿ ಮಾಡುವ ಪ್ರಯತ್ನ ಎಂದಿದ್ದಾರೆ.

ಕಾಂಗ್ರೆಸ್ ಎಂಎಲ್ ಸಿ ಬಲ್ಮೂರ್ ವೆಂಕಟ್ ಅವರು ಅಯ್ಯಂಗಾರ್ ಅವರ ಹೇಳಿಕೆಗಳ ಬಗ್ಗೆ ಹೈದರಾಬಾದ್ ಸೈಬರ್ ಅಪರಾಧ ಘಟಕಕ್ಕೆ ದೂರು ಸಲ್ಲಿಸಿದ್ದಾರೆ. ನಟನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಅಯ್ಯಂಗಾರ್ ತಮ್ಮ ಹೇಳಿಕೆ ಹಿಂಪಡೆಯಲು ನಿರಾಕರಿಸಿದರೆ ಅವರ ವಿರುದ್ಧ ಚಲನಚಿತ್ರೋದ್ಯಮ ಮತ್ತು ಕಲಾವಿದರ ಸಂಘಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಶ್ರೀಕಾಂತ್ ಅಯ್ಯಂಗಾರ್ ಈ ಸಂಬಂಧ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT