ಅಯೋಧ್ಯೆಯಲ್ಲಿ ಮತ್ತೊಂದು ಸ್ಫೋಟ 
ದೇಶ

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ.

ಅಯೋಧ್ಯೆ: ಇತ್ತೀಚೆಗೆ ಸ್ಫೋಟದಿಂದಾಗಿ ಸುದ್ದಿಗೆ ಗ್ರಾಸವಾಗಿದ್ದ ಅಯೋಧ್ಯೆಯಲ್ಲಿ ಮತ್ತೊಂದು ನಿಗೂಢ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಅಯೋಧ್ಯೆಯ ಹಳ್ಳಿಯೊಂದರಲ್ಲಿ ಗುರುವಾರ ರಾತ್ರಿ ಸಂಭವಿಸಿದ್ದ ಪ್ರಬಲ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ ನಡೆದ ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೋರ್ವ ಮಹಿಳೆ ಶವ ಪತ್ತೆಯಾಗಿದೆ.

ಈ ಹಿಂದೆ ಇದೇ ಜಾಗದಲ್ಲಿ 5 ಮೃತದೇಹಗಳು ಪತ್ತೆಯಾಗಿದ್ದವು. ಆ ಮೂಲಕ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮತ್ತೊಂದು 'ನಿಗೂಢ' ಸ್ಫೋಟ

ಇನ್ನು ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ. ಈ ವೇಳೆ ಜೆಸಿಬಿ ಚಾಲಕ ಭಯಭೀತನಾಗಿ ಜೆಸಿಬಿ ವಾಹನ ಬಿಟ್ಟು ಪರಾರಿಯಾಗಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಸರ್ಕಲ್ ಆಫೀಸರ್ (ಸಿಒ) ಶೈಲೇಂದ್ರ ಸಿಂಗ್ ಅವರು, 'ಸ್ಫೋಟಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅಗೆತದ ಯಂತ್ರಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಮೀಪದಲ್ಲಿದ್ದ ಮನೆಗಳನ್ನು ಸ್ಥಳಾಂತರಿಸಲಾಗಿದೆ' ಎಂದರು.

ಘಟನಾ ಸ್ಥಳದಿಂದ ದೂರವಿರುವಂತೆ ಮನವಿ

ಇದೇ ವೇಳೆ ರಕ್ಷಣಾ ಕಾರ್ಯಗಳಿಗೆ ಅನುಕೂಲವಾಗುವಂತೆ ಅಪಘಾತ ಸ್ಥಳದಿಂದ ದೂರ ಉಳಿಯುವಂತೆ ಅಧಿಕಾರಿಗಳು ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದು, ಸ್ಫೋಟದ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಕುರಿತು ಮಾಹಿತಿ ಪಡೆದಿದ್ದು, ಮೃತರ ಕುಟುಂಬಸ್ಥರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT