ಅಮೀರ್ ಖಾನ್ ಮುತಾಕಿ  
ದೇಶ

ಅಫ್ಘಾನಿಸ್ತಾನದ ಸಚಿವ ಮುತಾಕಿ ಆಗ್ರಾ ಭೇಟಿ ದಿಢೀರ್ ರದ್ದು! ಕಾರಣವೇನು?

ಮುತ್ತಕಿ ಉತ್ತರ ಪ್ರದೇಶದಿಂದ ದೆಹಲಿಗೆ ಹಿಂದಿರುಗುವ ಮೊದಲು ತಾಜ್ ಮಹಲ್ ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಳೆಯಲು ನಿರ್ಧರಿಸಲಾಗಿತ್ತು. ಆದರೆ ಭೇಟಿಯನ್ನು ದಿಢೀರನೇ ರದ್ದುಗೊಳಿಸಲಾಗಿದೆ.

ನವದೆಹಲಿ: ಭಾರತದ ಭೇಟಿಯಲ್ಲಿರುವ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ ಭಾನುವಾರದ ಆಗ್ರಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಈ ರದ್ದತಿಗೆ ಕಾರಣ ತಿಳಿದುಬಂದಿಲ್ಲ. ಆಫ್ಘನ್ ವಿದೇಶಾಂಗ ಸಚಿವರು ತಾಜ್ ಮಹಲ್ ನೋಡಲು ಇಂದು ಆಗ್ರಾಕ್ಕೆ ತೆರಳಬೇಕಿತ್ತು.

ಮುತಾಕಿ ಉತ್ತರ ಪ್ರದೇಶದಿಂದ ದೆಹಲಿಗೆ ಹಿಂದಿರುಗುವ ಮೊದಲು ತಾಜ್ ಮಹಲ್ ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಳೆಯಲು ನಿರ್ಧರಿಸಲಾಗಿತ್ತು. ಆದರೆ ಭೇಟಿಯನ್ನು ದಿಢೀರನೇ ರದ್ದುಗೊಳಿಸಲಾಗಿದೆ.

ಈ ರದ್ದತಿಯನ್ನು ಜಿಲ್ಲಾಡಳಿತದ ಪ್ರೋಟೋಕಾಲ್ ಇಲಾಖೆ ಖಚಿತಪಡಿಸಿದೆ. ಆರು ದಿನಗಳ ಭಾರತ ಪ್ರವಾಸದಲ್ಲಿರುವ ಮುತಾಕಿ, ನಾಲ್ಕು ವರ್ಷಗಳ ಹಿಂದೆ ಗುಂಪು ಅಧಿಕಾರವನ್ನು ವಶಪಡಿಸಿಕೊಂಡ ನಂತರ ಭಾರತಕ್ಕೆ ಭೇಟಿ ನೀಡಿದ ಮೊದಲ ಹಿರಿಯ ತಾಲಿಬಾನ್ ಸಚಿವರಾಗಿದ್ದಾರೆ.

ಅಮೀರ್ ಖಾನ್ ಮುತಾಕಿ, ಸುದ್ದಿಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿರ್ಬಂಧದ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ತಾಜ್ ಮಹಲ್ ಭೇಟಿ ದಿಢೀರ್ ರದ್ದಾಗಿದೆ. ಇದಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್