ಅಖಿಲೇಶ್ ಯಾದವ್ 
ದೇಶ

ಸಿಎಂ ಯೋಗಿ ಆದಿತ್ಯನಾಥ್ 'ನುಸುಳುಕೋರ': ಅಖಿಲೇಶ್ ಯಾದವ್ ಹೀಗೆ ಅಂದಿದ್ಯಾಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ನುಸುಳುಕೋರರ ಬಗ್ಗೆ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಅಖಿಲೇಶ್ ಯಾದವ್ ಈ ರೀತಿಯ ಮಾತುಗಳನ್ನಾಡಿದ್ದಾರೆ.

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು 'ನುಸುಳುಕೋರ' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಕರೆದಿದ್ದು, ಅವರನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆ.

ಲಖನೌದ ಲೂಹಿಯಾ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ವಲಸಿಗರ ಕುರಿತ ಬಿಜೆಪಿಯವರ ಬಳಿ ಇರುವ ಅಂಕಿಅಂಶಗಳು ನಕಲಿಯಾಗಿವೆ. ಅವರ ಅಂಕಿಅಂಶ ನಂಬುವವರು ದಾರಿ ತಪ್ಪುತ್ತಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿಯವರು ವಲಸಿಗರ ಕುರಿತು ತಪ್ಪು ಅಂಕಿಅಂಶಗಳನ್ನು ಕೊಡುವುದಾದರೆ ಉತ್ತರ ಪ್ರದೇಶದಲ್ಲೂ ನಾವು ನುಸುಳುಕೋರರನ್ನು ಕಾಣಬಹುದು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರಾಖಂಡದವರು. ಅವರನ್ನು ಅಲ್ಲಿಗೆ ವಾಪಸ್ ಕಳುಹಿಸಬೇಕೆಂದು ನಾವು ಬಯಸುತ್ತೇವೆ. ಸೈದ್ಧಾಂತಿಕ ದೃಷ್ಟಿಕೋನದಿಂದಲೂ ಅವರೊಬ್ಬ ನುಸುಳುಕೋರ ಎಂದರು.

ಆದಿತ್ಯನಾಥ್ ಅವರು ಬಿಜೆಪಿಯ ಸದಸ್ಯರಾಗಿರಲಿಲ್ಲ. ಅವರು ಇನ್ನೊಂದು ಪಕ್ಷದ ಸದಸ್ಯರಾಗಿದ್ದರು. ಪಕ್ಷಕ್ಕೆ ನುಸುಳಿದ ಅವರನ್ನು ಯಾವಾಗ ಹೊರಹಾಕಲಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನುಸುಳುಕೋರರ ಬಗ್ಗೆ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಅಖಿಲೇಶ್ ಯಾದವ್ ಈ ರೀತಿಯ ಮಾತುಗಳನ್ನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT