ಅಖಿಲೇಶ್ ಯಾದವ್ 
ದೇಶ

ಸಿಎಂ ಯೋಗಿ ಆದಿತ್ಯನಾಥ್ 'ನುಸುಳುಕೋರ': ಅಖಿಲೇಶ್ ಯಾದವ್ ಹೀಗೆ ಅಂದಿದ್ಯಾಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ನುಸುಳುಕೋರರ ಬಗ್ಗೆ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಅಖಿಲೇಶ್ ಯಾದವ್ ಈ ರೀತಿಯ ಮಾತುಗಳನ್ನಾಡಿದ್ದಾರೆ.

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು 'ನುಸುಳುಕೋರ' ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಕರೆದಿದ್ದು, ಅವರನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆ.

ಲಖನೌದ ಲೂಹಿಯಾ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ವಲಸಿಗರ ಕುರಿತ ಬಿಜೆಪಿಯವರ ಬಳಿ ಇರುವ ಅಂಕಿಅಂಶಗಳು ನಕಲಿಯಾಗಿವೆ. ಅವರ ಅಂಕಿಅಂಶ ನಂಬುವವರು ದಾರಿ ತಪ್ಪುತ್ತಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿಯವರು ವಲಸಿಗರ ಕುರಿತು ತಪ್ಪು ಅಂಕಿಅಂಶಗಳನ್ನು ಕೊಡುವುದಾದರೆ ಉತ್ತರ ಪ್ರದೇಶದಲ್ಲೂ ನಾವು ನುಸುಳುಕೋರರನ್ನು ಕಾಣಬಹುದು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರಾಖಂಡದವರು. ಅವರನ್ನು ಅಲ್ಲಿಗೆ ವಾಪಸ್ ಕಳುಹಿಸಬೇಕೆಂದು ನಾವು ಬಯಸುತ್ತೇವೆ. ಸೈದ್ಧಾಂತಿಕ ದೃಷ್ಟಿಕೋನದಿಂದಲೂ ಅವರೊಬ್ಬ ನುಸುಳುಕೋರ ಎಂದರು.

ಆದಿತ್ಯನಾಥ್ ಅವರು ಬಿಜೆಪಿಯ ಸದಸ್ಯರಾಗಿರಲಿಲ್ಲ. ಅವರು ಇನ್ನೊಂದು ಪಕ್ಷದ ಸದಸ್ಯರಾಗಿದ್ದರು. ಪಕ್ಷಕ್ಕೆ ನುಸುಳಿದ ಅವರನ್ನು ಯಾವಾಗ ಹೊರಹಾಕಲಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನುಸುಳುಕೋರರ ಬಗ್ಗೆ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಅಖಿಲೇಶ್ ಯಾದವ್ ಈ ರೀತಿಯ ಮಾತುಗಳನ್ನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT